Webdunia - Bharat's app for daily news and videos

Install App

ಜಿಂಬಾಬ್ವೆ ಪ್ರವಾಸಕ್ಕೂ ಕೆಎಲ್ ರಾಹುಲ್ ಇಲ್ಲ: ಇದೆಲ್ಲಾ ಆ ಒಂದು ಮಾತಿನ ಇಫೆಕ್ಟ್

Krishnaveni K
ಮಂಗಳವಾರ, 25 ಜೂನ್ 2024 (11:33 IST)
ಮುಂಬೈ: ಜಿಂಬಾಬ್ವೆ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ ಮಾಡಲಾಗಿದೆ. ಆದರೆ ಈ ತಂಡದಲ್ಲೂ ಕನ್ನಡಿಗ ಕೆಎಲ್ ರಾಹುಲ್ ಗೆ ಅವಕಾಶ ಸಿಕ್ಕಿಲ್ಲ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಟೀಂ ಇಂಡಿಯಾ ಕಂಡ ಪ್ರತಿಭಾವಂತ ಬ್ಯಾಟಿಗ ಕಮ್ ವಿಕೆಟ್ ಕೀಪರ್ ಆಗಿರುವ ಕೆಎಲ್ ರಾಹುಲ್ ರನ್ನು ಬೇಕೆಂದೇ ಕಡೆಗಣಿಸಲಾಗುತ್ತಿದೆಯೇ ಎಂಬ ಅನುಮಾನ ಶುರುವಾಗಿದೆ. ಇದಕ್ಕೆಲ್ಲಾ ಆ ಒಂದು ಹೇಳಿಕೆಯೇ ಕಾರಣವಾಗಿಬರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಜುಲೈ 6 ರಿಂದ ಜಿಂಬಾಬ್ವೆಯಲ್ಲಿ ನಡೆಯಲಿರುವ ಐದು ಪಂದ್ಯಗಳ ಟಿ20 ಸರಣಿಗೆ ಶುಬ್ಮನ್ ಗಿಲ್ ನೇತೃತ್ವದ 15 ಸದಸ್ಯರ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ಬಹುತೇಕ ಟಿ20 ವಿಶ್ವಕಪ್ ಸರಣಿಯಲ್ಲಿ ಅವಕಾಶ ಸಿಗದ ಹೊಸ ಪ್ರತಿಭೆಗಳಿಗೆ ಈ ತಂಡದಲ್ಲಿ ಅವಕಾಶ ನೀಡಲಾಗಿದೆ. ಆದರೆ ಕೆಎಲ್ ರಾಹುಲ್ ರನ್ನು ಹೊರಗಿಡಲಾಗಿದೆ.

ಇದಕ್ಕೆಲ್ಲಾ ಐಪಿಎಲ್ ಸಂದರ್ಭದಲ್ಲಿ ಲಕ್ನೋ ಕೋಚ್ ಜಸ್ಟಿನ್ ಲ್ಯಾಂಗರ್ ನೀಡಿದ್ದ ಹೇಳಿಕೆಯೇ ಕಾರಣವಿರಬಹುದಾ ಎಂದು ವಿಶ್ಲೇಷಿಸಲಾಗಿದೆ. ಲ್ಯಾಂಗರ್ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ರಾಹುಲ್ ಅಭಿಪ್ರಾಯ ಕೇಳಿದ್ದೆ. ಟೀಂ ಇಂಡಿಯಾ ಕೋಚ್ ಆದರೆ ರಾಜಕೀಯ ಒತ್ತಡಗಳಿರುತ್ತವೆ. ಐಪಿಎಲ್ ಗಿಂತಲೂ 10 ಪಟ್ಟು ಹೆಚ್ಚು ಒತ್ತಡ ಎದುರಿಸಬೇಕಾಗುತ್ತದೆ ಎಂದಿದ್ದರು ಎಂದು ಬಹಿರಂಗವಾಗಿ ಹೇಳಿದ್ದರು. ಇದರಿಂದಾಗಿ ರಾಹುಲ್ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಇದೇ ಕಾರಣಕ್ಕೆ ಜಿಂಬಾಬ್ವೆ ಸರಣಿಗೂ ರಾಹುಲ್ ರನ್ನು ಕಡೆಗಣಿಸಿರಬಹುದೇ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments