Webdunia - Bharat's app for daily news and videos

Install App

ಕೊನೆಗೂ ಕ್ರಿಕೆಟ್ ಗೆ ಮರಳಲು ಸಿದ್ಧರಾದ ಇಶಾನ್ ಕಿಶನ್

Krishnaveni K
ಮಂಗಳವಾರ, 13 ಫೆಬ್ರವರಿ 2024 (15:52 IST)
Photo Courtesy: Twitter
ಮುಂಬೈ: ಮಾನಸಿಕ ಬಳಲಿಕೆ ಕಾರಣ ನೀಡಿ ಇಷ್ಟು ದಿನ ಕ್ರಿಕೆಟ್ ನಿಂದ ದೂರವಿದ್ದು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದ ಕ್ರಿಕೆಟಿಗ ಇಶಾನ್ ಕಿಶನ್ ಇದೀಗ ಕ್ರಿಕೆಟ್ ಗೆ ಮರಳಲು ಸಿದ್ಧರಾಗಿದ್ದಾರೆ.
 

ಇಶಾನ್ ಕಿಶನ್ ಮುಂಬೈನಲ್ಲಿ ನಡೆಯಲಿರುವ ಡಿವೈ ಪಾಟೀಲ್ ಟೂರ್ನಮೆಂಟ್ ನಲ್ಲಿ ಆಡಲಿದ್ದಾರೆ ಎಂಬ ಮಾಹಿತಿಯಿದೆ. ಈ ಮೂಲಕ ಮತ್ತೆ ಸಕ್ರಿಯ ಕ್ರಿಕೆಟ್ ಗೆ ಮರಳಲು ಸಿದ್ಧತೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಇಶಾನ್ ತಮ್ಮ ಐಪಿಎಲ್ ನಾಯಕ ಹಾರ್ದಿಕ್ ಪಾಂಡ್ಯ ಜೊತೆ ಅಭ್ಯಾಸ ನಡೆಸುತ್ತಿದ್ದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು.

ದ.ಆಫ್ರಿಕಾ ಟೆಸ್ಟ್ ಸರಣಿಗೆ ಆಯ್ಕೆಯಾದ ಬಳಿಕ ಕೊನೆಯ ಕ್ಷಣದಲ್ಲಿ ಮಾನಸಿಕವಾಗಿ ಬಳಲಿರುವುದಾಗಿ ಕಾರಣ ನೀಡಿ ತಂಡದಿಂದ ಹೊರನಡೆದಿದ್ದ ಇಶಾನ್ ಕಿಶನ್ ಗೆ ಕೋಚ್ ದ್ರಾವಿಡ್ ರಣಜಿ ಟ್ರೋಫಿ ಆಡಿ ಫಿಟ್ನೆಸ್ ಸಾಬೀತುಪಡಿಸಲು ಸೂಚಿಸಿದ್ದರು. ಆದರೆ ಇದುವರೆಗೆ ಇಶಾನ್ ರಣಜಿ ಆಡದೇ ಮ್ಯಾನೇಜ್ ಮೆಂಟ್ ಸೂಚನೆಯನ್ನು ಕಡೆಗಣಿಸಿದ್ದರು. ಇದರಿಂದಾಗಿ ಇಶಾನ್ ಮೇಲೆ ಬಿಸಿಸಿಐ ಗರಂ ಆಗಿತ್ತು. ಇದೇ ಕಾರಣಕ್ಕೆ ಅವರನ್ನು ಇದೀಗ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ.

ಹಾರ್ದಿಕ್ ಪಾಂಡ್ಯ ಜೊತೆ ಅಭ್ಯಾಸ ನಡೆಸುವುದನ್ನು ನೋಡಿ ಇಶಾನ್ ಸದ್ಯಕ್ಕೆ ಟೀಂ ಇಂಡಿಯಾಗೆ ಮರಳುವ ಇರಾದೆಯೇ ಹೊಂದಿಲ್ಲ ಎಂಬ ಮಾತಿತ್ತು.  ರಾಷ್ಟ್ರೀಯ ತಂಡವನ್ನು ಕಡೆಗಣಿಸಿ ಐಪಿಎಲ್ ಗೆ ಪ್ರಾಶಸ್ತ್ಯ ನೀಡುವ ಆಟಗಾರರಿಗೆ ಖಡಕ್ ಸಂದೇಶ ಕೊಡಲು ಬಿಸಿಸಿಐ ತಯಾರಿ ನಡೆಸಿತ್ತು. ಇದರ ಬೆನ್ನಲ್ಲೇ ಇಶಾನ್ ಡಿವೈ ಪಾಟೀಲ್ ಟೂರ್ನಿ ಆಡಲು ಸಿದ್ಧರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments