Webdunia - Bharat's app for daily news and videos

Install App

ಅಭಿನಂದಿಸಲು ಸಿರಾಜ್‌ನನ್ನೇ ಕೈಬಿಟ್ಟ ಜಯ್‌ಶಾ: ಮುಸ್ಲಿಂ ಎಂಬ ಕಾರಣವೇ ಹೊಗಳಿಕೆಯಿಂದ ದೂರವಿರಲು ಕಾರಣವಾಯಿತೆ,ವಿವಾದ

Sampriya
ಸೋಮವಾರ, 7 ಜುಲೈ 2025 (16:48 IST)
Photo Credit X
ಮುಂಬೈ: ಇಂಗ್ಲೆಂಡ್ ವಿರುದ್ಧ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಟೆಸ್ಟ್‌ನಲ್ಲಿ ಭಾರತದ ಐತಿಹಾಸಿಕ ಗೆಲುವನ್ನು ಉಲ್ಲೇಖಿಸಿ, ಭಾರತ ತಂಡವನ್ನು ಅಭಿನಂದಿಸಿ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಜಯ್ ಶಾ ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಪೋಸ್ಟ್ ಇದೀಗ ವಿವಾದಕ್ಕೆ ಸಿಲುಕಿದೆ.

ಇದಕ್ಕೆ ಕಾರಣ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಹೆಸರನ್ನು ಕೈಬಿಟ್ಟಿರುವುದು ವಿವಾದಕ್ಕೆ ಕಾರಣವಾಗಿದೆ. ಭಾರತದ ನಾಯಕ ಶುಭಮನ್ ಗಿಲ್, ವೇಗಿ ಆಕಾಶ್ ದೀಪ್, ಆಲ್ ರೌಂಡರ್ ರವೀಂದ್ರ ಜಡೇಜಾ ಮತ್ತು ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರ ಹೆಸರನ್ನು ಪೋಸ್ಟ್‌ನಲ್ಲಿ ನಿರ್ದಿಷ್ಟವಾಗಿ ಉಲ್ಲೇಖಿಸಲಾಗಿದೆ. ಆದರೆ, ಎರಡನೇ ಟೆಸ್ಟ್‌ನಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಆರು ವಿಕೆಟ್ ಸೇರಿದಂತೆ ಏಳು ವಿಕೆಟ್ ಪಡೆದ ಸಿರಾಜ್ ಹೆಸರನ್ನು ಜಯ್ ಶಾ ಅವರು ಉಲ್ಲೇಖಿಸಿಲ್ಲ.

ಹಲವು ಮಂದಿ ಜಯ್‌ ಶಾ ಅವರ ಪೋಸ್ಟ್‌ಗೆ ಅಸಮಾಧಾನ ಹೊರಹಾಕಿದ್ದಾರೆ.  ಸಿರಾಜ್ ಮುಸ್ಲಿಂ ಎಂಬ ಕಾರಣಕ್ಕೆ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ಅಭಿಮಾನಿಯೊಬ್ಬರು ಟೀಕಿಸಿದ್ದಾರೆ.

ಇದು ಎಜ್‌ಬಾಸ್ಟನ್‌ನಲ್ಲಿ ಭಾರತಕ್ಕೆ ಮೊದಲ ಟೆಸ್ಟ್ ಗೆಲುವು. ಇದರೊಂದಿಗೆ ಪ್ರವಾಸಿ ಐದು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಗಿಲ್ ನಾಯಕತ್ವ ವಹಿಸಿಕೊಂಡ ನಂತರ ಭಾರತಕ್ಕೆ ಇದು ಮೊದಲ ಗೆಲುವು. ಮೂರನೇ ಟೆಸ್ಟ್ ಜುಲೈ 10 ರಂದು ಲಾರ್ಡ್ಸ್‌ನಲ್ಲಿ ಆರಂಭವಾಗಲಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಆಕಾಶ್‌ ದೀಪ್‌ ಬೆಂಕಿ ದಾಳಿಗೆ ಇಂಗ್ಲೆಂಡ್ ತತ್ತರ: ಶುಭಮನ್‌ ಗಿಲ್‌ ಬಗಳಕ್ಕೆ ದಾಖಲೆಯ 336 ರನ್‌ಗಳ ಭರ್ಜರಿ ಜಯ

England-India Test: ರನ್‌ ಹೊಳೆ ಹರಿಸಿದ ಶುಭಮನ್‌ ಗಿಲ್‌ನನ್ನು ಮುಕ್ತ ಕಂಠದಿಂದ ಕೊಂಡಾಡಿದ ವಿರಾಟ್‌ ಕೊಹ್ಲಿ

ಮುಂದಿನ ಸುದ್ದಿ
Show comments