Webdunia - Bharat's app for daily news and videos

Install App

Jasprit Bumrah: ಭಾರತೀಯರು ಕೇಳಲು ಬಯಸದೇ ಇದ್ದ ಸುದ್ದಿಕೊಟ್ಟ ಜಸ್ಪ್ರೀತ್ ಬುಮ್ರಾ

Krishnaveni K
ಬುಧವಾರ, 12 ಫೆಬ್ರವರಿ 2025 (09:25 IST)
Photo Credit: X
ಮುಂಬೈ: ಇತ್ತೀಚೆಗಿನ ದಿನಗಳಲ್ಲಿ ಟೀಂ ಇಂಡಿಯಾ ಯಶಸ್ಸು ಕಾಣುತ್ತಿದೆ ಎಂದರೆ ಅದಕ್ಕೆ ಮುಖ್ಯ ಕಾರಣ ಜಸ್ಪ್ರೀತ್ ಬುಮ್ರಾ. ಆದರೆ ಈಗ ಬುಮ್ರಾ ಭಾರತೀಯ ಅಭಿಮಾನಿಗಳು ಕೇಳಲು ಬಯಸದೇ ಇರುವ ಸುದ್ದಿ ಕೊಟ್ಟಿದ್ದಾರೆ.

ಆಸ್ಟ್ರೇಲಿಯಾ ಸರಣಿ ವೇಳೆ ಬೆನ್ನು ನೋವಿಗೊಳಗಾಗಿದ್ದ ಬುಮ್ರಾ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಿದ್ದಾರೆ. ಇದು ಟೀಂ ಇಂಡಿಯಾ ಮತ್ತು ಅಭಿಮಾನಿಗಳಿಗೆ ಕಹಿ ಸುದ್ದಿ. ಎದುರಾಳಿಗಳು ಸಂಭ್ರಮಿಸುವಂತಹಾ ಸುದ್ದಿ.

ಈ ಹಿಂದೆ ಟಿ20 ವಿಶ್ವಕಪ್ ಗೆಲ್ಲುವಾಗಲೂ ಬುಮ್ರಾ ಬೌಲಿಂಗ್ ಎದುರಾಳಿಗಳಿಗೆ ಸಿಂಹ ಸ್ವಪ್ನವಾಗಿತ್ತು. ಇದೀಗ ಬುಮ್ರಾ ಇಲ್ಲದೇ ಐಸಿಸಿ ಈವೆಂಟ್ ಒಂದರಲ್ಲಿ ಆಡುವುದು ಭಾರತದ ಪಾಲಿಗೆ ಅಷ್ಟು ಶುಭ ಸುದ್ದಿಯಲ್ಲ. ಅವರ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಶಮಿ, ಅರ್ಷ್ ದೀಪ್ ಸಿಂಗ್ ಮೇಲೆ ಹೆಚ್ಚಿನ ಹೊರೆ ಬೀಳಲಿದೆ.

ಬುಮ್ರಾ ಸ್ಥಾನಕ್ಕೆ ಹರ್ಷಿತ್ ರಾಣಾ ಆಯ್ಕೆಯಾಗಿದ್ದು, ಈ ವೇಗಿಗಳ ಪಡೆ ಬುಮ್ರಾ ಅನುಪಸ್ಥಿತಿಯನ್ನು ಮರೆಮಾಚುವಂತಹ ಪ್ರದರ್ಶನ ನೀಡಬೇಕಾಗಿದೆ. ಜೊತೆಗೆ ದುಬೈನಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಸ್ಪಿನ್ನರ್ ಗಳೂ ಪ್ರಮುಖ ಪಾತ್ರ ವಹಿಸಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments