Webdunia - Bharat's app for daily news and videos

Install App

ಬಾರ್ಬಡೋಸ್ ನಲ್ಲಿ ಸಿಲುಕಿದ ಪತ್ರಕರ್ತರ ರಕ್ಷಣೆಗೆ ಬಂದ ಜಯ್ ಶಾ

Krishnaveni K
ಬುಧವಾರ, 3 ಜುಲೈ 2024 (16:06 IST)
ಬಾರ್ಬಡೋಸ್: ಟಿ20 ವಿಶ್ವಕಪ್ 2024 ರ ವರದಿ ಮಾಡಲು ವೆಸ್ಟ್ ಇಂಡೀಸ್ ಗೆ ತೆರಳಿದ್ದ ಭಾರತೀಯ ಪತ್ರಕರ್ತರ ಗುಂಪು ಕೂಡಾ ಬೆರಿಲ್ ಚಂಡಮಾರುತದಿಂದಾಗಿ ತವರಿಗೆ ಮರಳಲಾಗದೇ ಸಂಕಷ್ಟಕ್ಕೆ ಸಿಲುಕಿತು. ಇದೀಗ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ನೆರವಾಗಿದ್ದಾರೆ.

ಟಿ20 ವಿಶ್ವಕಪ್ ಗೆದ್ದ ಮರುದಿನವೇ ಟೀಂ ಇಂಡಿಯಾ ಕ್ರಿಕೆಟಿಗರು ಭಾರತಕ್ಕೆ ಮರಳಬೇಕಾಗಿತ್ತು. ಆದರೆ ಚಂಡಮಾರುತದಿಂದಾಗಿ ಹೋಟೆಲ್ ಕೊಠಡಿಯಲ್ಲೇ ಉಳಿಯಬೇಕಾಗಿ ಬಂದಿತು. ಇದೀಗ ಪರಿಸ್ಥಿತಿ ಸುಧಾರಿಸಿದ್ದು ಆಟಗಾರರು ಸ್ವದೇಶಕ್ಕೆ ಮರಳಲು ಏರ್ ಇಂಡಿಯಾ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ.

ಕ್ರಿಕೆಟಿಗರ ಜೊತೆ ಬಾರ್ಬಡೋಸ್ ನಲ್ಲಿ ಭಾರತದ ಕ್ರೀಡಾ ಪತ್ರಕರ್ತರೂ ಸಿಲುಕಿಕೊಂಡಿದ್ದರು. ಅವರೂ ಭಾರತಕ್ಕೆ ಮರಳಲು ತೊಂದರೆಯಾಗಿತ್ತು. ಇದೀಗ ಅವರಿಗೂ ಸುರಕ್ಷಿತವಾಗಿ ಮರಳಲು ಸ್ವತಃ ಜಯ್ ಶಾ ವ್ಯವಸ್ಥೆ ಮಾಡಿದ್ದಾರೆ. ಕ್ರಿಕೆಟಿಗರ ಜೊತೆ ಪತ್ರಕರ್ತರಿಗೂ ಪ್ರಯಾಣಿಸಲು ವಿಮಾನದಲ್ಲಿ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ಟಿ20 ವಿಶ್ವಕಪ್ ಗೆಲುವಿನ ಬಳಿಕ ಭಾರತದ ಕ್ರೀಡಾ ಪತ್ರಕರ್ತರು ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಜೊತೆ ಫೋಟೋ ಸೆಷನ್ ನಡೆಸಿದ್ದರು. ಭಾರತ ತಂಡಕ್ಕೆ ಬೆಂಬಲಿಸಲು ಮತ್ತು ಪ್ರಚಾರ ಮಾಡಲು ಬಂದಿದ್ದ ಪತ್ರಕರ್ತರಿಗೆ ಈಗ ಜಯ್ ಶಾ ನೆರವಾಗಿ ಹೃದಯ ವೈಶಾಲ್ಯತೆ ಮೆರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments