Webdunia - Bharat's app for daily news and videos

Install App

ಸಿಕ್ಕಿದ ಅವಕಾಶ ಸದ್ಭಳಕೆ ಮಾಡಲು ಕರ್ನಾಟಕ ಕ್ರಿಕೆಟರ್‌ಗಳ ನಿರ್ಧಾರ

Webdunia
ಬುಧವಾರ, 1 ಜುಲೈ 2015 (13:35 IST)
ಭಾರತ ಮತ್ತು ಭಾರತ ಎ ತಂಡಗಳಿಗೆ ಆಯ್ಕೆಯಾದ ಕರ್ನಾಟಕ ಕ್ರಿಕೆಟರ್‌ಗಳು ತಮಗೆ ಸಿಕ್ಕಿದ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಜಿಂಬಾಬ್ವೆ ಪ್ರವಾಸಕ್ಕೆ ಭಾರತದ ಏಕದಿನ ತಂಡದಲ್ಲಿ ಮತ್ತು ಆಸ್ಟ್ರೇಲಿಯಾ ಎ ತಂಡದ ವಿರುದ್ಧ ಭಾರತ ಎ ತಂಡಕ್ಕೆ ಒಟ್ಟು  ಕರ್ನಾಟಕದ ಏಳು ಆಟಗಾರರನ್ನು ಆಯ್ಕೆ ಮಾಡಲಾಗಿದೆ.
 
 ರಾಬಿನ್ ಉತ್ತಪ್ಪಾ, ಮನೀಶ್ ಪಾಂಡೆ ಮತ್ತು ಸ್ಟುವರ್ಟ್ ಬಿನ್ನಿ ಅವರು ಅಜಿಂಕ್ಯಾ ರಹಾನೆ ನೇತೃತ್ವದ ಭಾರತ ತಂಡದಲ್ಲಿರುವ 15 ಮಂದಿ ತಂಡಕ್ಕೆ ಆಯ್ಕೆಯಾಗಿದ್ದಾರೆ ಮತ್ತು ಲೋಕೇಶ್ ರಾಹುಲ್, ಕರುಣ್ ನಾಯರ್, ಶ್ರೇಯಾಸ್ ಗೋಪಾಲ್ ಮತ್ತು ಅಭಿಮನ್ಯು ಮಿಷನ್ ಭಾರತ ಎ ತಂಡಕ್ಕೆ ಆಯ್ಕೆಯಾಗಿದ್ದಾರೆ. 
ಕರ್ನಾಟಕ ತಂಡವು ರಣಜಿ ಟ್ರೋಫಿ, ಇರಾನಿ ಟ್ರೋಫಿ ಮತ್ತು ವಿಜಯ್ ಹಜಾರೆ ಟ್ರೋಫಿಯನ್ನು 2013-14ರಲ್ಲಿ ಗೆದ್ದಿತ್ತು ಮತ್ತು ಕಳೆದ ಸೀಸನ್‌ನಲ್ಲಿ ಕೂಡ ಅಭೂತಪೂರ್ವ ಹ್ಯಾಟ್ರಿಕ್ ಪುನರಾವರ್ತನೆ ಮಾಡಿತ್ತು.
 
ಆಸ್ಟ್ರೇಲಿಯಾದಲ್ಲಿ ಕಳೆದ ವರ್ಷ ಭಾರತ ಎ ತಂಡದ ಕಳಪೆ ಪ್ರದರ್ಶನದಿಂದ ಉತ್ತಪ್ಪಾ ಅವರನ್ನು ಆಯ್ಕೆದಾರರ ರೆಡಾರ್ ಪಟ್ಟಿಯಿಂದ ತೆಗೆಯಲಾಗಿತ್ತು. ತಾವು ಈ ಅವಕಾಶ ಸದ್ಭಳಕೆ ಮಾಡಿಕೊಳ್ಳುವುದಾಗಿ ಉತ್ತಪ್ಪಾ ತಿಳಿಸಿದರು. 
 
ಕಳೆದ ಎರಡು ವರ್ಷಗಳಲ್ಲಿ ನಾವು 6 ಟ್ರೋಫಿಗಳನ್ನು ಗೆದ್ದಿದ್ದೇವೆ. ಆದರೆ ದೇಶಕ್ಕೆ ಒಬ್ಬರು ಅಥವಾ ಇಬ್ಬರು ಮಾತ್ರ ಪ್ರತಿನಿಧಿಸುತ್ತಿದ್ದರು. ಆದರೆ ಈ ಬಾರಿ ನಮ್ಮ ಪೈಕಿ ಅನೇಕ ಮಂದಿ ರಾಷ್ಟ್ರೀಯ ತಂಡಕ್ಕೆ ಮತ್ತು ಎ ತಂಡಕ್ಕೆ ಆಯ್ಕೆಯಾಗಿರುವುದು ಸಂತೋಷ ತಂದಿದೆ ಎಂದು ಉತ್ತಪ್ಪ ಹೇಳಿದರು.  ಕರ್ನಾಟಕದ ಎಲ್ಲಾ ಆಟಗಾರರು ಉತ್ತಮ ಪ್ರದರ್ಶನ ನೀಡಿ ತಮ್ಮ ಸಾಮರ್ಥ್ಯ ರುಜುವಾತು ಮಾಡುತ್ತಾರೆಂದು ಉತ್ತಪ್ಪಾ ವಿಶ್ವಾಸ ವ್ಯಕ್ತಪಡಿಸಿದರು. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments