Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ನಾಟಕೀಯ ತಿರುವಿನ ನಂತರ ಸೋತ ಕರ್ನಾಟಕ

Webdunia
ಶನಿವಾರ, 8 ಡಿಸೆಂಬರ್ 2018 (16:33 IST)
ರಾಜ್ ಕೋಟ್: ಕರ್ನಾಟಕ ಮತ್ತು ಸೌರಾಷ್ಟ್ರ ತಂಡಗಳ ನಡುವೆ ರಾಜ್ ಕೋಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯ ಇಂದು ಹಲವು ನಾಟಕೀಯ ವಿದ್ಯಮಾನಗಳಿಗೆ ಸಾಕ್ಷಿಯಾಯಿತು. ಆದರೆ ಅಂತಿಮವಾಗಿ ಕರ್ನಾಟಕ 87 ರನ್ ಗಳಿಂದ ಸೋಲನುಭವಿಸಿತು.


ದ್ವಿತೀಯ ಇನಿಂಗ್ಸ್ ನಲ್ಲಿ ಸೌರಾಷ್ಟ್ರವನ್ನು ಕೇವಲ 79 ರನ್ ಗಳಿಗೆ ಆಲೌಟ್ ಮಾಡಿದ ಕರ್ನಾಟಕ ಹುಡುಗರ ಕರಾಮತ್ತು ನೋಡಿ ಇಂದೇ ರಾಜ್ಯದ ತಂಡ ಪಂದ್ಯ ಗೆಲ್ಲುತ್ತದೇನೋ ಎಂಬ ಆಸೆ ಚಿಗುರಿತ್ತು. ಕರುಣ್ ನಾಯರ್ ಮತ್ತು ಶ್ರೇಯಸ್ ಗೋಪಾಲ್ 63 ರನ್ ಗಳ ಜತೆಯಾಟವಾಡಿ ಆ ಆಸೆಗೆ ನೀರೆರದರು ಕೂಡಾ. ಆದರೆ ಗೆಲುವಿಗೆ ಬೇಕಾಗಿದ್ದ ಕೇವಲ 179 ರನ್ ಗಳ ಗುರಿ ಬೆನ್ನತ್ತಿದ ಕರ್ನಾಟಕದ ಬ್ಯಾಟ್ಸ್ ಮನ್ ಗಳು ಈ ಜೋಡಿ ಮುರಿದುಬೀಳುತ್ತಿದ್ದಂತೆ ಸಂಪೂರ್ಣವಾಗಿ ಪತನದ ಹಾದಿ ಹಿಡಿಯಿತು.

ಸೌರಾಷ್ಟ್ರದ ಧರ್ಮೇಂದ್ರಸಿಂಹ ಜಡೇಜ ಮತ್ತು ಕಮಲೇಶ್ ಮಕ್ವಾನ ಜೋಡಿಯ ಬೌಲಿಂಗ್ ಗೆ ತತ್ತರಿಸಿದ ಕರ್ನಾಟಕ ಕೇವಲ 91 ರನ್ ಗಳಿಗೆ ಆಲೌಟ್ ಆಯಿತು. ಅದರಲ್ಲೂ ನಾಲ್ವರು ಬ್ಯಾಟ್ಸ್ ಮನ್ ಗಳು ಸತತವಾಗಿ ಶೂನ್ಯಕ್ಕೆ ಔಟಾಗಿದ್ದು ವಿಪರ್ಯಾಸ. ಆರಂಭಿಕ ರವಿಕಾಂತ್ ಸಮರ್ಥ್ ಸೇರಿದಂತೆ ಒಟ್ಟು ಐವರು ಬ್ಯಾಟ್ಸ್ ಮನ್ ಗಳು ಶೂನ್ಯ ಸಂಪಾದಿಸಿದರು.

ಅತ್ತ ಸೌರಾಷ್ಟ್ರದ ಖುಷಿಗೆ ಮಿತಿಯೇ ಇರಲಿಲ್ಲ. ಹೇಳಿ ಕೇಳಿ ಇದು ನಾಯಕ ಜಯದೇವ್ ಶಾಗೆ ವಿದಾಯದ ಪಂದ್ಯವಾಗಿತ್ತು. ಅದನ್ನು ಸೌರಾಷ್ಟ್ರ ಗೆಲುವಿನ ಮೂಲಕವೇ ವಿದಾಯ ನೀಡಿತು. ಅಂತಿಮವಾಗಿ ಜಡೇಜಾ 4 ವಿಕೆಟ್ ಕಿತ್ತರೆ ಕಮಲೇಶ್ 5 ವಿಕೆಟ್ ಕಬಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments