Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಕುಸಿದ ಅಗ್ರರು, ಕರ್ನಾಟಕಕ್ಕೆ ನಿಶ್ಚಲ್ ಆಸರೆ

Webdunia
ಮಂಗಳವಾರ, 13 ನವೆಂಬರ್ 2018 (17:23 IST)
ನಾಗ್ಪುರ: ಹಾಲಿ ಚಾಂಪಿಯನ್ ವಿದರ್ಭ ಎದುರಿನ ರಣಜಿ ಟ್ರೋಫಿ ಲೀಗ್ ಪಂದ್ಯದಲ್ಲಿ ಕರ್ನಾಟಕದ ದ್ವಿತೀಯ ದಿನದಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿದೆ.

ಇದಕ್ಕೂ ಮೊದಲು ಪ್ರಥಮ ಇನಿಂಗ್ಸ್ ನಲ್ಲಿ ವಿದರ್ಭ 307 ಕ್ಕೆ ಆಲೌಟ್ ಆಗಿತ್ತು. ಈ ಮೊತ್ತ ಬೆನ್ನತ್ತಿದ ಕರ್ನಾಟಕಕ್ಕೆ ರವಿಕಾಂತ್ ಸಮರ್ಥ್, ಕರುಣ್ ನಾಯರ್, ಸ್ಟುವರ್ಟ್ ಬಿನ್ನಿಯಂತಹ ಪ್ರಮುಖ ಆಟಗಾರರು ಬೇಗನೇ ಔಟಾಗುವ ಮೂಲಕ ಆಘಾತ ಸಿಕ್ಕಿತು.

ಆದರೆ ಐದನೇ ವಿಕೆಟ್ ಗೆ ಜತೆಯಾದ ದೇಗಾ ನಿಶ್ಚಲ್ ಮತ್ತು ಶ್ರೇಯಸ್ ಗೋಪಾಲ್ 62 ರನ್ ಗಳ ಜತೆಯಾಟವಾಡಿ ಚೇತರಿಕೆ ನೀಡಿದರು. ಶ್ರೇಯಸ್ 30 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಬಳಿಕ ನಿಶ್ಚಲ್ ಗೆ ಜತೆಯಾದ ವಿಕೆಟ್ ಕೀಪರ್ ಶರತ್ 46 ರನ್ ಗಳಿಸಿ ನಾಳೆಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಕರ್ನಾಟಕಕ್ಕೆ ವಿದರ್ಭದ ಮೊದಲ ಇನಿಂಗ್ಸ್ ಮೊತ್ತ ದಾಟಲು ಇನ್ನೂ 99 ರನ್ ಗಳ ಅಗತ್ಯವಿದೆ. ಆದರೆ ಪ್ರಮುಖ ಬ್ಯಾಟ್ಸ್ ಮನ್ ಗಳು ಔಟಾಗಿರುವುದರಿಂದ ಹಾದಿ ಕಠಿಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments