Webdunia - Bharat's app for daily news and videos

Install App

ಕೆಎಲ್ ರಾಹುಲ್, ದೇವದತ್ತ ಪಡಿಕ್ಕಲ್ ಸಾಹಸ: ಸೈಯದ್ ಮುಷ್ತಾಕ್ ಟೂರ್ನಿ ಫೈನಲ್ ಗೆ ಕರ್ನಾಟಕ

Webdunia
ಶನಿವಾರ, 30 ನವೆಂಬರ್ 2019 (09:11 IST)
ಸೂರತ್: ಕೆಎಲ್ ರಾಹುಲ್ ಮತ್ತು ದೇವದತ್ತ ಪಡಿಕ್ಕಲ್ ಬ್ಯಾಟಿಂಗ್ ಅಬ್ಬರದಿಂದಾಗಿ ಕರ್ನಾಟಕ ಕ್ರಿಕೆಟ್ ತಂಡ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯ ಫೈನಲ್ ತಲುಪಿದೆ.


ಸೆಮಿಫೈನಲ್ ನಲ್ಲಿ ಹರ್ಯಾಣ ವಿರುದ್ಧ ಕರ್ನಾಟಕ 8 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಹರ್ಯಾಣ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿತ್ತು. ಕರ್ನಾಟಕ ಪರ ಅಭಿಮನ್ಯು ಮಿಥುನ್ ಹ್ಯಾಟ್ರಿಕ್ ವಿಕೆಟ್ ಸಾಧನೆಯೊಂದಿಗೆ ಐದು ವಿಕೆಟ್ ಗಳ ಗೊಂಚಲು ಪಡೆದರು.

ಇದಕ್ಕೆ ಉತ್ತರವಾಗಿ ಅಬ್ಬರದ ಬ್ಯಾಟಿಂಗ್ ಮಾಡಿದ ಕರ್ನಾಟಕದ ಆರಂಭಿಕರಾದ ಕೆಎಲ್ ರಾಹುಲ್ ಮತ್ತು ದೇವದತ್ತ ಪಡಿಕ್ಕಲ್ ಕೇವಲ 15 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿ ಗೆಲುವಿನ ದಡ ಮುಟ್ಟಿಸಿದರು. ಒಟ್ಟು 31 ಎಸೆತಗಳಲ್ಲಿ 6 ಸಿಕ್ಸರ್, 4 ಬೌಂಡರಿಗಳೊಂದಿಗೆ ರಾಹುಲ್ 66 ರನ್ ಗಳಿಸಿದರೆ, ಪಡಿಕ್ಕಲ್ 42 ಎಸೆತಗಳಿಂದ 11 ಬೌಂಡರಿ, 4 ಸಿಕ್ಸರ್ ಗಳೊಂದಿಗೆ 87 ರನ್ ಚಚ್ಚಿದರು. ಮಯಾಂಕ್ ಅಗರ್ವಾಲ್ ಅಜೇಯ 30 ರನ್ ಗಳಿಸಿದರು. ಇದರೊಂದಿಗೆ ಹಾಲಿ ಚಾಂಪಿಯನ್ ಕರ್ನಾಟಕ ಸತತ ಮತ್ತೊಂದು ಪ್ರಶಸ್ತಿ ಗೆಲ್ಲಲು ಹೊರಟಿದೆ. ಫೈನಲ್ ನಲ್ಲಿ ನಾಳೆ ತಮಿಳುನಾಡು ತಂಡವನ್ನು ಎದುರಿಸಬೇಕಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments