Webdunia - Bharat's app for daily news and videos

Install App

ವಿಜಯ್ ಹಜಾರೆ ಟ್ರೋಫಿ ಗೆದ್ದ ಕರ್ನಾಟಕ: ಸಚಿನ್ ದಾಖಲೆ ಮುರಿದ ಮಯಾಂಕ್

Webdunia
ಮಂಗಳವಾರ, 27 ಫೆಬ್ರವರಿ 2018 (16:51 IST)
ದೆಹಲಿ: ಸೌರಾಷ್ಟ್ರ ವಿರುದ್ಧ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಕರ್ನಾಟಕ 41 ರನ್ ಗಳಿಂದ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ.
 

ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಆರಂಭಿಕ ಕುಸಿತ ಕಂಡರೂ ನಂತರ ಮಯಾಂಕ್ ಅಗರ್ವಾಲ್ ಅವರ 90 ರನ್ ಮತ್ತ ರವಿಕಾಂತ್ ಸಮರ್ಥ್ ಅವರ 48 ರನ್ ಗಳ ಇನಿಂಗ್ಸ್ ನಿಂದ ಚೇತರಿಸಿಕೊಂಡಿತು. ಇದರಿಂದಾಗಿ ರಾಜ್ಯದ ತಂಡ 45.5 ಓವರ್ ಗಳಲ್ಲಿ 253 ರ ನ್ ಗಳಿಗೆ ಆಲೌಟ್ ಆಯಿತು. ರಣಜಿಯ ಭರ್ಜರಿ ಫಾರ್ಮ್ ಮುಂದುವರಿಸಿದ ಮಯಾಂಕ್ ಸಚಿನ್ ತೆಂಡುಲ್ಕರ್ ಅವರ ದಾಖಲೆಯೊಂದನ್ನು ಮುರಿದರು.

ಎಲ್ಲಾ ಮಾದರಿಯ ದೇಶೀಯ ಟೂರ್ನಿಯಲ್ಲಿ ಒಂದೇ ಋತುವಿನಲ್ಲಿ 700 ರನ್ ಗಳಿಸುವ ಮೂಲಕ ತೆಂಡುಲ್ಕರ್ ದಾಖಲೆ ಮುರಿದರು. ಕರ್ನಾಟಕಕ್ಕೆ ದಿಟ್ಟ ಹೋರಾಟ ನೀಡಿದ ಸೌರಾಷ್ಟ್ರದ ಚೇತೇಶ್ವರ ಪೂಜಾರ 94 ರನ್ ಗಳಿಸಿ ಭೀತಿ ಹುಟ್ಟಿಸಿದರು. ಆದರೆ ಅವರಿಗೆ ತಕ್ಕ ಸಾಥ್ ಸಿಗದೇ ಸೌರಾಷ್ಟ್ರ ಸೋತಿತು. ಕರ್ನಾಟಕ ಪರ ಯುವ ಬೌಲರ್ ಗಳಾದ ಪ್ರದೀಶ್ ಕೃಷ್ಣ 3 ಮತ್ತು ಪ್ರದೀಪ್ ಟಿ 2 ವಿಕೆಟ್ ಕಬಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

ಮುಂದಿನ ಸುದ್ದಿ
Show comments