ಟಿ20 ವಿಶ್ವಕಪ್ ನಿಂದ ರಿಂಕು ಸಿಂಗ್ ಸ್ಥಾನ ಕಳೆದುಕೊಳ್ಳಲು ಕೆಕೆಆರ್ ತಂಡ ಕಾರಣ

Krishnaveni K
ಮಂಗಳವಾರ, 7 ಮೇ 2024 (20:46 IST)
ಕೋಲ್ಕೊತ್ತಾ: ಈ ಬಾರಿ ಟಿ20 ವಿಶ್ವಕಪ್ ತಂಡದಲ್ಲಿ ಟೀಂ ಇಂಡಿಯಾ ಯುವ ಬ್ಯಾಟಿಗ ರಿಂಕು ಸಿಂಗ್ ಗೆ ಅವಕಾಶ ಸಿಗದೇ ಇರಲು ಐಪಿಎಲ್ ನ ಕೋಲ್ಕೊತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯೇ ಕಾರಣ ಎಂದು ಮಾಜಿ ಕ್ರಿಕೆಟಿಗ ಅಶೋಕ್ ಮಲ್ಹೋತ್ರಾ ಆಪಾದಿಸಿದ್ದಾರೆ.

ರಿಂಕು ಸಿಂಗ್ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬಹುದು ಎಂದು ಎಲ್ಲರ ನಿರೀಕ್ಷೆಯಾಗಿತ್ತು. ಇದಕ್ಕಾಗಿ ಅವರ ಕುಟುಂಬಸ್ಥರೂ ಸಿಹಿ ತರಿಸಿ ಸಂಭ್ರಮಿಸಲು ತಯಾರಿದ್ದರು. ಆದರೆ ಕೊನೆಯ ಗಳಿಗೆಯಲ್ಲಿ ರಿಂಕು ಸಿಂಗ್ ಗೆ ತಂಡದಲ್ಲಿ ಅವಕಾಶ ಸಿಗಲಿಲ್ಲ.

 ಈ ಮೊದಲು ಟೀಂ ಇಂಡಿಯಾ ಪರ ಟಿ20 ಸರಣಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ರಿಂಕು ಸಿಂಗ್ ಈ ಬಾರಿ ಐಪಿಎಲ್ ನಲ್ಲಿ ಕೆಕೆಆರ್ ಪರ ಫಾರ್ಮ್ ಪ್ರದರ್ಶಿಸಿಲ್ಲ. ಕಳೆದ ಐಪಿಎಲ್ ಸೀಸನ್ ನಲ್ಲಿ ಬೆಸ್ಟ್ ಫಿನಿಶರ್ ಎನಿಸಿಕೊಂಡಿದ್ದ ರಿಂಕು ಈ ಬಾರಿ ಸಾಧಾರಣ ಪ್ರದರ್ಶನ ತೋರಿದ್ದಾರೆ.

ಅವರಿಗೆ ಕೆಕೆಆರ್ ಮ್ಯಾನೇಜ್ ಮೆಂಟ್ ಸಾಕಷ್ಟು ಅವಕಾಶ ನೀಡಿಲ್ಲ. ಈ ಕಾರಣಕ್ಕೇ ರಿಂಕುಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಕ್ಕಿಲ್ಲ. ಅದಕ್ಕೇ ಅವರನ್ನು ಟಿ20 ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ ಎಂದು ಅಶೋಕ್ ಮಲ್ಹೋತ್ರಾ ಆರೋಪಿಸಿದ್ದಾರೆ. ಆದರೆ ಈ ಬಾರಿ ಟಿ20 ವಿಶ್ವಕಪ್ ನಲ್ಲಿ ರಿಂಕು ಮೀಸಲು ಆಟಗಾರನಾಗಿ ಸ್ಥಾನ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

ಮುಂದಿನ ಸುದ್ದಿ
Show comments