ಐಪಿಎಲ್ 2024: ಲಕ್ನೋ ಮಾಲಿಕನ ಔದಾರ್ಯವೇ ಬೇಡವೆಂದು ಸ್ವಂತ ಖರ್ಚಿನಲ್ಲಿ ಪ್ರಯಾಣಿಸಿದ ಕೆಎಲ್ ರಾಹುಲ್

Krishnaveni K
ಮಂಗಳವಾರ, 14 ಮೇ 2024 (11:54 IST)
ಲಕ್ನೋ: ಮೊನ್ನೆಯಷ್ಟೇ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಹೀನಾಯ ಸೋಲಿನ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ರನ್ನು ಮಾಲಿಕ ಸಂಜೀವ್ ಗೊಯೆಂಕಾ ಮೈದಾನದಲ್ಲೇ ತರಾಟೆಗೆ ತೆಗೆದುಕೊಂಡ ದೃಶ್ಯ ವೈರಲ್ ಆಗಿತ್ತು.

ಈ ಘಟನೆ ಬಗ್ಗೆ ಭಾರೀ ಖಂಡನೆ ವ್ಯಕ್ತವಾಗಿತ್ತು. ಮಾಲಿಕ ಎಂಬ ಮಾತ್ರಕ್ಕೆ ಆಟಗಾರರ ಮೇಲೆ ಇಷ್ಟೊಂದು ದರ್ಪ ತೋರುವ ಅಗತ್ಯವಿತ್ತೇ? ಒಂದು ವೇಳೆ ಅಸಮಾಧಾನಗಳಿದ್ದರೆ ಅದನ್ನು ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಬಹುದಿತ್ತು. ಅದು ಬಿಟ್ಟು ತಂಡಕ್ಕೆ ಸಾಕಷ್ಟು ಒಳಿತು ಮಾಡಿರುವ ಭಾರತ ಕ್ರಿಕೆಟ್ ತಂಡದ ಹಿರಿಯ ಆಟಗಾರರಲ್ಲಿ ಒಬ್ಬರಾದ ಕೆಎಲ್ ರಾಹುಲ್ ರನ್ನು ಸಾರ್ವಜನಿಕವಾಗಿ ಬೈದು ಅವಮಾನ ಮಾಡಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತವಾಗಿತ್ತು.

ಇದೆಲ್ಲಾ ಬೆಳವಣಿಗೆಗಳ ಮಧ್ಯೆ ಇಂದು ದೆಹಲಿಯಲ್ಲಿ ಲಕ್ನೋ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಮತ್ತೊಂದು ಪಂದ್ಯ ನಡೆಯುತ್ತಿದೆ. ಈ ಪಂದ್ಯಕ್ಕೆ ಕೆಎಲ್ ರಾಹುಲ್ ಮಾಲಿಕನ ಔದಾರ್ಯವೇ ಬೇಡವೆಂದು ಸ್ವಂತ ಖರ್ಚಿನಲ್ಲಿ ದೆಹಲಿಗೆ ಪ್ರಯಾಣಿಸಿದ್ದಾರೆ. ತಂಡದ ಜೊತೆ ಟೀಂ ಬಸ್ ನಲ್ಲಿ ಪ್ರಯಾಣಿಸದ ರಾಹುಲ್ ತಮ್ಮದೇ ಖರ್ಚಿನಲ್ಲಿ ಪ್ರಯಾಣಿಸಿದ್ದು ಅವರ ಬೇಸರ ಎಷ್ಟಿದೆಯೆಂದು ತೋರಿಸಿಕೊಟ್ಟಿದೆ.

ಈ ನಡುವೆ ಕೆಎಲ್ ರಾಹುಲ್ ರನ್ನು ಮುಂದಿನ ಆವೃತ್ತಿಯಿಂದ ನಾಯಕತ್ವದಿಂದ ಕೆಳಗಿಳಿಸುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಇನ್ನೊಂದೆಡೆ ಆರ್ ಸಿಬಿ ಫ್ಯಾನ್ಸ್ ನೀವು ನಮ್ಮ ತಂಡಕ್ಕೆ ಬನ್ನಿ ಎಂದು ಕರೆ ಕೊಡುತ್ತಿದ್ದಾರೆ. ಹೀಗಾಗಿ ರಾಹುಲ್ ಮುಂದಿನ ಆವೃತ್ತಿಯಲ್ಲಿ ಲಕ್ನೋ ತೊರೆಯುವುದು ಹೆಚ್ಚು ಕಡಿಮೆ ಪಕ್ಕಾ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಮುಂದಿನ ಸುದ್ದಿ
Show comments