Webdunia - Bharat's app for daily news and videos

Install App

ಕೊನೆಗೂ ಅವಕಾಶ ಸಿಕ್ತಲ್ಲಾ ಎಂದು ಖುಷಿಯಾದ್ರು ಕೆಎಲ್ ರಾಹುಲ್

Webdunia
ಭಾನುವಾರ, 1 ಜುಲೈ 2018 (09:09 IST)
ಡುಬ್ಲಿನ್: ಕೊನೆಗೂ ತಮ್ಮ ಬೆಂಚ್ ಕಾಯಿಸುವ ಹುಡುಗರ ಕಷ್ಟ ಏನೆಂದು ಟೀಂ ಇಂಡಿಯಾ ಕ್ರಿಕೆಟಿಗರ ಪೈಕಿ ಕೇಳಿದರೆ ಮೊದಲು ಉತ್ತರ ಹೇಳುವುದು ಕೆಎಲ್ ರಾಹುಲ್ ಇರಬಹುದು.

ಪ್ರತಿಭೆಯಿದ್ದೂ ರಾಹುಲ್ ಅವಕಾಶ ಪಡೆದಿರುವುದಕ್ಕಿಂತ ಹೆಚ್ಚು ಬೆಂಚ್ ಕಾಯಿಸಿದ್ದೇ ಹೆಚ್ಚು. ಆದರೆ ಐರ್ಲೆಂಡ್ ವಿರುದ್ಧ ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಗೂ ತಮ್ಮ ಮೆಚ್ಚಿನ ಆರಂಭಿಕ ಸ್ಥಾನ ಸಿಕ್ಕಿದ್ದಕ್ಕೆ ಖುಷಿಯಾಗಿದ್ದರು.

‘ಇಂತಹ ಪ್ರತಿಭಾವಂತರ ತಂಡದಲ್ಲಿ ಅವಕಾಶ ಸಿಗುವುದೇ ಕಷ್ಟ ಎಂದು ನನಗೆ ಗೊತ್ತು. ಅವಕಾಶ ಸಿಕ್ಕಾಗ ಬಳಸಿಕೊಳ್ಳಲು ಸಾಧ್ಯವಾಗಿದ್ದಕ್ಕೆ ಖುಷಿಯಾಗಿದೆ. ತಂಡದಿಂದ ಹೊರಗೆ ಇದ್ದಾಗಲೆಲ್ಲಾ ಮರಳಿ ಬರುವುದಕ್ಕೆ ಕಠಿಣ ಪರಿಶ್ರಮ ಪಡುತ್ತಿರುತ್ತೇನೆ’ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಇದೇ ಮೊದಲ ಬಾರಿಗೆ ಇಂಗ್ಲೆಂಡ್ ನಲ್ಲಿ ಆಡುತ್ತಿರುವ ಬಗ್ಗೆಯೂ ಉತ್ಸುಕರಾಗಿರುವುದಾಗಿ ಹೇಳಿಕೊಂಡಿದ್ದಾರೆ. ತಾನು ಸೇರಿದಂತೆ ಟೀಂ ಇಂಡಿಯಾದ ಯುವ ಆಟಗಾರರೆಲ್ಲರೂ ಈ ಬಗ್ಗೆ ಎಕ್ಸೈಟ್ ಆಗಿದ್ದೀವಿ. ಇದು ನಮ್ಮ ಸಾಮರ್ಥ್ಯಕ್ಕೆ ಸವಾಲು ನೀಡುವ ಸಂದರ್ಭ. ಅದನ್ನು ನಿಭಾಯಿಸಿಯೇ ಬಿಡುತ್ತೇವೆ ಎಂದು ವಿಶ್ವಾಸದಿಂದಲೇ ರಾಹುಲ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments