ಕೊನೆಗೂ ಅವಕಾಶ ಸಿಕ್ತಲ್ಲಾ ಎಂದು ಖುಷಿಯಾದ್ರು ಕೆಎಲ್ ರಾಹುಲ್

Webdunia
ಭಾನುವಾರ, 1 ಜುಲೈ 2018 (09:09 IST)
ಡುಬ್ಲಿನ್: ಕೊನೆಗೂ ತಮ್ಮ ಬೆಂಚ್ ಕಾಯಿಸುವ ಹುಡುಗರ ಕಷ್ಟ ಏನೆಂದು ಟೀಂ ಇಂಡಿಯಾ ಕ್ರಿಕೆಟಿಗರ ಪೈಕಿ ಕೇಳಿದರೆ ಮೊದಲು ಉತ್ತರ ಹೇಳುವುದು ಕೆಎಲ್ ರಾಹುಲ್ ಇರಬಹುದು.

ಪ್ರತಿಭೆಯಿದ್ದೂ ರಾಹುಲ್ ಅವಕಾಶ ಪಡೆದಿರುವುದಕ್ಕಿಂತ ಹೆಚ್ಚು ಬೆಂಚ್ ಕಾಯಿಸಿದ್ದೇ ಹೆಚ್ಚು. ಆದರೆ ಐರ್ಲೆಂಡ್ ವಿರುದ್ಧ ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಗೂ ತಮ್ಮ ಮೆಚ್ಚಿನ ಆರಂಭಿಕ ಸ್ಥಾನ ಸಿಕ್ಕಿದ್ದಕ್ಕೆ ಖುಷಿಯಾಗಿದ್ದರು.

‘ಇಂತಹ ಪ್ರತಿಭಾವಂತರ ತಂಡದಲ್ಲಿ ಅವಕಾಶ ಸಿಗುವುದೇ ಕಷ್ಟ ಎಂದು ನನಗೆ ಗೊತ್ತು. ಅವಕಾಶ ಸಿಕ್ಕಾಗ ಬಳಸಿಕೊಳ್ಳಲು ಸಾಧ್ಯವಾಗಿದ್ದಕ್ಕೆ ಖುಷಿಯಾಗಿದೆ. ತಂಡದಿಂದ ಹೊರಗೆ ಇದ್ದಾಗಲೆಲ್ಲಾ ಮರಳಿ ಬರುವುದಕ್ಕೆ ಕಠಿಣ ಪರಿಶ್ರಮ ಪಡುತ್ತಿರುತ್ತೇನೆ’ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಇದೇ ಮೊದಲ ಬಾರಿಗೆ ಇಂಗ್ಲೆಂಡ್ ನಲ್ಲಿ ಆಡುತ್ತಿರುವ ಬಗ್ಗೆಯೂ ಉತ್ಸುಕರಾಗಿರುವುದಾಗಿ ಹೇಳಿಕೊಂಡಿದ್ದಾರೆ. ತಾನು ಸೇರಿದಂತೆ ಟೀಂ ಇಂಡಿಯಾದ ಯುವ ಆಟಗಾರರೆಲ್ಲರೂ ಈ ಬಗ್ಗೆ ಎಕ್ಸೈಟ್ ಆಗಿದ್ದೀವಿ. ಇದು ನಮ್ಮ ಸಾಮರ್ಥ್ಯಕ್ಕೆ ಸವಾಲು ನೀಡುವ ಸಂದರ್ಭ. ಅದನ್ನು ನಿಭಾಯಿಸಿಯೇ ಬಿಡುತ್ತೇವೆ ಎಂದು ವಿಶ್ವಾಸದಿಂದಲೇ ರಾಹುಲ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments