ಬಡ ವಿದ್ಯಾರ್ಥಿಯ ಫೀಸ್ ಕಟ್ಟಿ ಮತ್ತೊಮ್ಮೆ ಕೆಎಲ್ ರಾಹುಲ್

Krishnaveni K
ಮಂಗಳವಾರ, 8 ಅಕ್ಟೋಬರ್ 2024 (10:04 IST)
ಬೆಂಗಳೂರು: ಸತತ ಎರಡನೇ ವರ್ಷ ಬಡ ವಿದ್ಯಾರ್ಥಿಯ ಶಿಕ್ಷಣ ಶುಲ್ಕ ಪಾವತಿಸಿ ಕರ್ನಾಟಕ ಮೂಲದ ಕ್ರಿಕೆಟಿಗ ಕೆಎಲ್ ರಾಹುಲ್ ಎಲ್ಲರ ಮನಗೆದ್ದಿದ್ದಾರೆ. ಬಿಕಾಂ ಓದುತ್ತಿರುವ ಅಮೃತ್ ಮಾವಿನಕಟ್ಟೆ ಎಂಬ ವಿದ್ಯಾರ್ಥಿಗೆ ರಾಹುಲ್ ನೆರವಾಗಿದ್ದಾರೆ.

ಕಳೆದ ವರ್ಷ ಮೊದಲ ವರ್ಷದ ಶುಲ್ಕ ಪಾವತಿಸಿದ್ದ ಕೆಎಲ್ ರಾಹುಲ್, ಎರಡನೇ ವರ್ಷದ ಶುಲ್ಕವನ್ನೂ ಭರಿಸುವುದಾಗಿ ಭರವಸೆ ನೀಡಿದ್ದರು. ರಾಹುಲ್ ತಾವು ಈ ಹಿಂದೆ ಕೊಟ್ಟ ಮಾತನ್ನು ಮರೆತಿರಲಿಲ್ಲ. ಇದೀಗ 3 ನೇ ಮತ್ತು ನಾಲ್ಕನೇ ಸೆಮಿಸ್ಟರ್ ನ 75,504 ರೂ. ಪಾವತಿಸುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

ಅಮೃತ್ ಮೂಲತಃ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದವರು. ಉತ್ತಮ ಅಂಕ ಪಡೆದಿದ್ದರೂ ಅವರಿಗೆ ಪದವಿ ಶಿಕ್ಷಣಕ್ಕೆ ಕಾಲೇಜಿಗೆ ಸೇರಲು ದುಡ್ಡಿನ ಕೊರತೆಯಾಗಿತ್ತು. ಅವರ ಪರಿಸ್ಥಿತಿ ಸಂಘಟನೆಯೊಂದರ ಮೂಲಕ ಕೆಎಲ್ ರಾಹುಲ್ ಗೆ ತಿಳಿಯಿತು.

ತಕ್ಷಣವೇ ಅವರು ವಿದ್ಯಾರ್ಥಿಯ ಮೊದಲ ವರ್ಷದ ಶುಲ್ಕ ಪಾವತಿಸಿದ್ದಲ್ಲದೆ, ಮುಂದೆಯೂ ನೆರವು ನೀಡುವುದಾಗಿ ಭರವಸೆ ನೀಡಿದ್ದರು. ರಾಹುಲ್ ನೀಡಿದ ಸಹಾಯದಿಂದಾಗಿ ಮೊದಲ ವರ್ಷ ಉತ್ತಮ ಅಂಕಗಳೊಂದಿಗೆ ಪೂರ್ತಿ ಮಾಡಿರುವ ಅಮೃತ್ ಈಗ ದ್ವಿತೀಯ ವರ್ಷಕ್ಕೆ ಕಾಲಿಟ್ಟಿದ್ದಾರೆ. ಆದರೆ ಅಂದು ನೀಡಿದ ಭರವಸೆಯನ್ನು ಮರೆಯದೇ ರಾಹುಲ್ ಈಗ ಎರಡನೇ ವರ್ಷಕ್ಕೂ ಸಹಾಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಐಪಿಎಲ್ ನಲ್ಲಿ ಮಾತ್ರ ಹುಲಿ.. ಇಂಗ್ಲೆಂಡ್ ವಿರುದ್ಧ ಸೋತ ಬಳಿಕ ಗಂಭೀರ್, ಕ್ಯಾಪ್ಟನ್ ಶ್ರೇಯಸ್ ಚರ್ಚೆ ಜೋರು Video

IND vs ENG: ಹೇಗಿದ್ದ ಟೀಂ ಇಂಡಿಯಾ ಗತಿ ಹೇಗಾಗೋಯ್ತಲ್ಲಾ.. ಟೀಂ ಇಂಡಿಯಾ ಈ ಪರಿ ಸೋಲುವುದಕ್ಕೆ ಕಾರಣ ಯಾರು

ಧೋನಿ, ಕೊಹ್ಲಿ ಸೋತಿಲ್ವಾ, ಶ್ರೇಯಸ್ ಕೂಡಾ ಅವರಂತೆ ಗ್ರೇಟ್ ಕ್ಯಾಪ್ಟನ್ ಆಗ್ತಾನೆ: ಅಣ್ಣನ ಪರ ತಂಗಿ ಬ್ಯಾಟಿಂಗ್ Video

IND vs ENG: ಟೀಂ ಇಂಡಿಯಾಕ್ಕೆ ಇಂದು ಕೊನೆ ಚಾನ್ಸ್, ಈ ಆಟಗಾರನಿಗೆ ಕೊಕ್ ಸಾಧ್ಯತೆ

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

ಮುಂದಿನ ಸುದ್ದಿ
Show comments