ಕೆಎಲ್ ರಾಹುಲ್ ಈ ಕಾರಣಕ್ಕೆ ಆರ್ ಸಿಬಿಗೆ ಬರೋದು ಇನ್ನು ಡೌಟು ಅಂತಿದ್ದಾರೆ ಫ್ಯಾನ್ಸ್

Krishnaveni K
ಮಂಗಳವಾರ, 27 ಆಗಸ್ಟ್ 2024 (10:15 IST)
Photo Credit: X
ನವದೆಹಲಿ: ಈ ಬಾರಿ ಐಪಿಎಲ್ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ರನ್ನು ಆರ್ ಸಿಬಿ ಖರೀದಿಸಲಿದೆ ಮತ್ತು ಅವರು ನಾಯಕರಾಗಲಿದ್ದಾರೆ ಎಂದು ಅಂದುಕೊಂಡಿದ್ದ ಫ್ಯಾನ್ಸ್ ಗೆ ಯಾಕೋ ನಿರಾಸೆಯಾಗುವಂತಿದೆ.

ನಿನ್ನೆಯಷ್ಟೇ ಕೆಎಲ್ ರಾಹುಲ್ ದೆಹಲಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮಾಲಿಕ ಸಂಜೀವ್ ಗೊಯೆಂಕಾ ಕಚೇರಿಗೆ ತೆರಳಿ ಅಲ್ಲಿ ಅವರನ್ನು ಭೇಟಿ ಮಾಡಿದ್ದರು. ಮಾತುಕತೆ ಬಳಿಕ ಇಬ್ಬರೂ ಜೊತೆಯಾಗಿ ಫೋಟೋ ತೆಗೆಸಿಕೊಂಡಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮುಂದಿನ ಐಪಿಎಲ್ ಗೆ ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಬೇಕು, ಯಾರನ್ನು ಕೈ ಬಿಡಬೇಕು ಎಂದು ಚರ್ಚೆ ನಡೆಸುತ್ತಿರುವಾಗಲೇ ರಾಹುಲ್ ಈ ರೀತಿ ಸಂಜೀವ್ ಗೊಯೆಂಕಾರನ್ನು ಭೇಟಿಯಾಗಿದ್ದು ನೋಡಿದರೆ ಅವರು ಲಕ್ನೋ ಬಿಡುವುದು ಅನುಮಾನ ಎನ್ನಲಾಗುತ್ತಿದೆ.

ಲಕ್ನೋಗೆ ಮುಂದಿನ ಸೀಸನ್ ಗೆ ಜಹೀರ್ ಖಾನ್ ರನ್ನು ಮೆಂಟರ್ ಆಗಿ ಕರೆತರಲು ಮಾತುಕತೆ ನಡೆಯುತ್ತಿದೆಯಂತೆ. ತಂಡದಲ್ಲಿ ಮುಂದಿನ ಸೀಸನ್ ಗೆ ಯಾರನ್ನು ಉಳಿಸಬೇಕು, ಯಾರನ್ನು ಕೈ ಬಿಡಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಮಾತುಕತೆ ನಡೆಸಲು ಕೆಎಲ್ ರಾಹುಲ್ ಮಾಲಿಕರನ್ನು ಭೇಟಿಯಾಗಿರಬಹುದು ಎನ್ನಲಾಗುತ್ತಿದೆ. ಇಬ್ಬರೂ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ ರಾಹುಲ್ ಫೋಟೋ ನೋಡಿ ಆರ್ ಸಿಬಿ ಅಭಿಮಾನಿಗಳಿಗಂತೂ ನಿರಾಸೆಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟ್ ತಾಳ್ಮೆಯನ್ನು ಪರೀಕ್ಷಿಸುತ್ತದೆ: ಮಗ ಅರ್ಜುನ್ ಚೊಚ್ಚಲ ಪ್ರದರ್ಶನಕ್ಕೆ ಫುಲ್ ಖುಷ್ ಆದ ಸಚಿನ್ ತೆಂಡೂಲ್ಕರ್‌

ಭಾರತ T20I ನಾಯಕತ್ವ ಯಾರ ಹೆಗಲಿಗೆ

ಹಾಲಿ ಐಪಿಎಲ್‌ನಲ್ಲಿ ಕಣಕ್ಕಿಳಿಯದ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ ಘೋಷಣೆಯತ್ತ ಎಲ್ಲರ ಚಿತ್ತ

ಅಭಿಮಾನಿಯ ಕಣ್ಣೀರಿಗೆ ಕರಗಿದ ಹಿಟ್‌ಮ್ಯಾನ್: ಪುಟ್ಟ ಬಾಲಕಿಗೆ ಸರ್ಪ್ರೈಸ್ ನೀಡಿದ ರೋಹಿತ್ ಶರ್ಮಾ Video

ಇದ್ಯಾವ ಟೈಪ್ ಬೌಲಿಂಗ್... ಕೃಣಾಲ್ ಪಾಂಡ್ಯ ಬೌಲಿಂಗ್ ಗೆ ಕಾವ್ಯಾ ಮಾರನ್ ಸಿಟ್ಟು: Viral video

ಮುಂದಿನ ಸುದ್ದಿ
Show comments