ಕೆಎಲ್ ರಾಹುಲ್ ಈ ಕಾರಣಕ್ಕೆ ಆರ್ ಸಿಬಿಗೆ ಬರೋದು ಇನ್ನು ಡೌಟು ಅಂತಿದ್ದಾರೆ ಫ್ಯಾನ್ಸ್

Krishnaveni K
ಮಂಗಳವಾರ, 27 ಆಗಸ್ಟ್ 2024 (10:15 IST)
Photo Credit: X
ನವದೆಹಲಿ: ಈ ಬಾರಿ ಐಪಿಎಲ್ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ರನ್ನು ಆರ್ ಸಿಬಿ ಖರೀದಿಸಲಿದೆ ಮತ್ತು ಅವರು ನಾಯಕರಾಗಲಿದ್ದಾರೆ ಎಂದು ಅಂದುಕೊಂಡಿದ್ದ ಫ್ಯಾನ್ಸ್ ಗೆ ಯಾಕೋ ನಿರಾಸೆಯಾಗುವಂತಿದೆ.

ನಿನ್ನೆಯಷ್ಟೇ ಕೆಎಲ್ ರಾಹುಲ್ ದೆಹಲಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮಾಲಿಕ ಸಂಜೀವ್ ಗೊಯೆಂಕಾ ಕಚೇರಿಗೆ ತೆರಳಿ ಅಲ್ಲಿ ಅವರನ್ನು ಭೇಟಿ ಮಾಡಿದ್ದರು. ಮಾತುಕತೆ ಬಳಿಕ ಇಬ್ಬರೂ ಜೊತೆಯಾಗಿ ಫೋಟೋ ತೆಗೆಸಿಕೊಂಡಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮುಂದಿನ ಐಪಿಎಲ್ ಗೆ ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಬೇಕು, ಯಾರನ್ನು ಕೈ ಬಿಡಬೇಕು ಎಂದು ಚರ್ಚೆ ನಡೆಸುತ್ತಿರುವಾಗಲೇ ರಾಹುಲ್ ಈ ರೀತಿ ಸಂಜೀವ್ ಗೊಯೆಂಕಾರನ್ನು ಭೇಟಿಯಾಗಿದ್ದು ನೋಡಿದರೆ ಅವರು ಲಕ್ನೋ ಬಿಡುವುದು ಅನುಮಾನ ಎನ್ನಲಾಗುತ್ತಿದೆ.

ಲಕ್ನೋಗೆ ಮುಂದಿನ ಸೀಸನ್ ಗೆ ಜಹೀರ್ ಖಾನ್ ರನ್ನು ಮೆಂಟರ್ ಆಗಿ ಕರೆತರಲು ಮಾತುಕತೆ ನಡೆಯುತ್ತಿದೆಯಂತೆ. ತಂಡದಲ್ಲಿ ಮುಂದಿನ ಸೀಸನ್ ಗೆ ಯಾರನ್ನು ಉಳಿಸಬೇಕು, ಯಾರನ್ನು ಕೈ ಬಿಡಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಮಾತುಕತೆ ನಡೆಸಲು ಕೆಎಲ್ ರಾಹುಲ್ ಮಾಲಿಕರನ್ನು ಭೇಟಿಯಾಗಿರಬಹುದು ಎನ್ನಲಾಗುತ್ತಿದೆ. ಇಬ್ಬರೂ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ ರಾಹುಲ್ ಫೋಟೋ ನೋಡಿ ಆರ್ ಸಿಬಿ ಅಭಿಮಾನಿಗಳಿಗಂತೂ ನಿರಾಸೆಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments