Webdunia - Bharat's app for daily news and videos

Install App

ಕೆಎಲ್ ರಾಹುಲ್ ಈ ಕಾರಣಕ್ಕೆ ಆರ್ ಸಿಬಿಗೆ ಬರೋದು ಇನ್ನು ಡೌಟು ಅಂತಿದ್ದಾರೆ ಫ್ಯಾನ್ಸ್

Krishnaveni K
ಮಂಗಳವಾರ, 27 ಆಗಸ್ಟ್ 2024 (10:15 IST)
Photo Credit: X
ನವದೆಹಲಿ: ಈ ಬಾರಿ ಐಪಿಎಲ್ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ರನ್ನು ಆರ್ ಸಿಬಿ ಖರೀದಿಸಲಿದೆ ಮತ್ತು ಅವರು ನಾಯಕರಾಗಲಿದ್ದಾರೆ ಎಂದು ಅಂದುಕೊಂಡಿದ್ದ ಫ್ಯಾನ್ಸ್ ಗೆ ಯಾಕೋ ನಿರಾಸೆಯಾಗುವಂತಿದೆ.

ನಿನ್ನೆಯಷ್ಟೇ ಕೆಎಲ್ ರಾಹುಲ್ ದೆಹಲಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮಾಲಿಕ ಸಂಜೀವ್ ಗೊಯೆಂಕಾ ಕಚೇರಿಗೆ ತೆರಳಿ ಅಲ್ಲಿ ಅವರನ್ನು ಭೇಟಿ ಮಾಡಿದ್ದರು. ಮಾತುಕತೆ ಬಳಿಕ ಇಬ್ಬರೂ ಜೊತೆಯಾಗಿ ಫೋಟೋ ತೆಗೆಸಿಕೊಂಡಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮುಂದಿನ ಐಪಿಎಲ್ ಗೆ ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಬೇಕು, ಯಾರನ್ನು ಕೈ ಬಿಡಬೇಕು ಎಂದು ಚರ್ಚೆ ನಡೆಸುತ್ತಿರುವಾಗಲೇ ರಾಹುಲ್ ಈ ರೀತಿ ಸಂಜೀವ್ ಗೊಯೆಂಕಾರನ್ನು ಭೇಟಿಯಾಗಿದ್ದು ನೋಡಿದರೆ ಅವರು ಲಕ್ನೋ ಬಿಡುವುದು ಅನುಮಾನ ಎನ್ನಲಾಗುತ್ತಿದೆ.

ಲಕ್ನೋಗೆ ಮುಂದಿನ ಸೀಸನ್ ಗೆ ಜಹೀರ್ ಖಾನ್ ರನ್ನು ಮೆಂಟರ್ ಆಗಿ ಕರೆತರಲು ಮಾತುಕತೆ ನಡೆಯುತ್ತಿದೆಯಂತೆ. ತಂಡದಲ್ಲಿ ಮುಂದಿನ ಸೀಸನ್ ಗೆ ಯಾರನ್ನು ಉಳಿಸಬೇಕು, ಯಾರನ್ನು ಕೈ ಬಿಡಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಮಾತುಕತೆ ನಡೆಸಲು ಕೆಎಲ್ ರಾಹುಲ್ ಮಾಲಿಕರನ್ನು ಭೇಟಿಯಾಗಿರಬಹುದು ಎನ್ನಲಾಗುತ್ತಿದೆ. ಇಬ್ಬರೂ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ ರಾಹುಲ್ ಫೋಟೋ ನೋಡಿ ಆರ್ ಸಿಬಿ ಅಭಿಮಾನಿಗಳಿಗಂತೂ ನಿರಾಸೆಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments