Webdunia - Bharat's app for daily news and videos

Install App

ಒಂದು ವಿಷಯ ಹೇಳಬೇಕಾಗಿದೆ ಎಂದು ಫ್ಯಾನ್ಸ್ ತಲೆಗೆ ಹುಳ ಬಿಟ್ಟ ಕೆಎಲ್ ರಾಹುಲ್

Krishnaveni K
ಶುಕ್ರವಾರ, 23 ಆಗಸ್ಟ್ 2024 (10:50 IST)
ಬೆಂಗಳೂರು: ಕನ್ನಡಿಗ, ಟೀಂ ಇಂಡಿಯಾ ಬ್ಯಾಟಿಗ ಕೆಎಲ್ ರಾಹುಲ್ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ದಿಡೀರ್ ಆಗಿ ಹಾಕಿರುವ ಪೋಸ್ಟ್ ಒಂದು ಎಲ್ಲರ ತಲೆಗೆ ಹುಳ ಬಿಟ್ಟಂತಾಗಿದೆ.

ರಾಹುಲ್ ನಿನ್ನೆ ಸಂಜೆ ಇದ್ದಕ್ಕಿದ್ದಂತೆ ‘ನನಗೆ ಒಂದು ವಿಷಯ ಹೇಳಬೇಕಾಗಿದೆ. ನಿರೀಕ್ಷಿಸಿ’ ಎಂದಷ್ಟೇ ಇನ್ ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿದ್ದರು. ಅವರ ಈ ಪೋಸ್ಟ್ ನೋಡುತ್ತಿದ್ದಂತೇ ಎಲ್ಲರಿಗೂ ಅಚ್ಚರಿಯಾಗಿತ್ತು. ಇದೇನು ಮಹತ್ವದ ವಿಚಾರ ಹೇಳಲಿದ್ದಾರೆ ಎಂದು ಎಲ್ಲರೂ ಕಾಯುತ್ತಲೇ ಇದ್ದರು.

ಇದನ್ನು ನೋಡಿ ರಾಹುಲ್ ತಮ್ಮ ವೃತ್ತಿ ಜೀವನಕ್ಕೆ ನಿವೃತ್ತಿ ಹೇಳುತ್ತಿರಬಹುದಾ ಎಂಬ ಆತಂಕವೂ ಕೆಲವರಿಗೆ ಬಂದಿದ್ದು ಸುಳ್ಳಲ್ಲ. ಮತ್ತೆ ಕೆಲವರು ಅವರು ಆರ್ ಸಿಬಿಗೆ ಸೇರ್ಪಡೆಯಾಗುತ್ತಿರುವ ಬಗ್ಗೆ ಹೇಳಬಹುದೇನೋ ಎಂದು ಕುತೂಹಲದಿಂದ ಕಾಯುತ್ತಿದ್ದರು. ಆದರೆ ಕೊನೆಯಲ್ಲಿ ರಾಹುಲ್ ತಮ್ಮ ಸ್ಟೈಲಿಶ್ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ.

ಇದನ್ನು ನೋಡಿದರೆ ಅವರು ಯಾವುದೋ ಬ್ರ್ಯಾಂಡ್ ಬಗ್ಗೆ ಹೇಳುತ್ತಿರಬಹುದು ಎಂದು ಅಂದಾಜಿಸಲಾಗಿದೆ. ಹಾಗಿದ್ದರೂ ಈ ಫೋಟೋ ನೋಡಿ ಏನೋ ದೊಡ್ಡದಾಗಿ ಸಿಗ್ನಲ್ ಕೊಡ್ತಿದ್ದೀರಿ ಏನು ಅಂತ ಬೇಗ ಹೇಳಿ ಬಾಸ್ ಎಂದು ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments