Webdunia - Bharat's app for daily news and videos

Install App

ಗೌತಮ್ ಗಂಭೀರ್ ಕೋಚ್ ಆದರೆ ಕೆಎಲ್ ರಾಹುಲ್ ಗೆ ಅದೃಷ್ಟ ಖುಲಾಯಿಸುತ್ತಾ

Krishnaveni K
ಬುಧವಾರ, 10 ಜುಲೈ 2024 (11:42 IST)
Photo Credit: X
ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದು ಈಗ ಕೆಎಲ್ ರಾಹುಲ್ ಅಭಿಮಾನಿಗಳ ಮುಖದಲ್ಲಿ ಕೊಂಚ ಸಮಾಧಾನ ಮೂಡಿದೆ. ಟಿ20 ಕ್ರಿಕೆಟ್ ನಿಂದ ಸಂಪೂರ್ಣವಾಗಿ ಸೈಡ್ ಲೈನ್ ಆಗಿದ್ದ ರಾಹುಲ್ ಗೆ ಇನ್ನು ತಂಡದಲ್ಲಿ ಸ್ಥಾನ ಸಿಗಬಹುದು ಎಂಬ ವಿಶ್ವಾಸ ಮೂಡಿದೆ.

ಕೆಎಲ್ ರಾಹುಲ್ ಮತ್ತು ಗೌತಮ್ ಗಂಭೀರ್ ಈಗಾಗಲೇ ಐಪಿಎಲ್ ನಲ್ಲಿ ಜೊತೆಯಾಗಿ ಕೆಲಸ ಮಾಡಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ರಾಹುಲ್ ಕೋಚ್ ಆಗಿದ್ದರೆ ಗಂಭೀರ್ ಮೆಂಟರ್ ಆಗಿದ್ದರು. ಇವರಿಬ್ಬರು ಎರಡು ಋತುವಿನಲ್ಲಿ ಜೊತೆಯಾಗಿ ಕೆಲಸ ಮಾಡಿದ್ದರು.

ಇದೀಗ ಕೆಎಲ್ ರಾಹುಲ್ ಟೀಂ ಇಂಡಿಯಾದಿಂದ ಕಿರು ಮಾದರಿ ಕ್ರಿಕೆಟ್ ನಲ್ಲಿ ಕಡೆಗಣಿಸಲ್ಪಟ್ಟಿದ್ದಾರೆ. ಮುಂದೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ರಾಹುಲ್ ನಾಯಕರಾಗಲಿದ್ದಾರೆ ಎಂಬ ಮಾತುಗಳಿವೆ. ಈ ಸರಣಿಗೆ ರೋಹಿತ್ ಶರ್ಮಾ ಗೈರಾಗುವ ಸಾಧ್ಯತೆಯಿದೆ. ವಿಶೇಷವೆಂದರೆ ಗಂಭೀರ್ ಗೂ ಟೀಂ ಇಂಡಿಯಾ ಕೋಚ್ ಆಗಿ ಇದು ಮೊದಲ ಸರಣಿಯಾಗಲಿದೆ.

ಹೀಗಾಗಿ ಗಂಭೀರ್ ಗೆ ಮುಖ್ಯ ಕೋಚ್ ಆಗಿ ಮೊದಲ ಸರಣಿಯಲ್ಲೇ ರಾಹುಲ್ ಜೊತೆ ಕೆಲಸ ಮಾಡುವ ಅವಕಾಶ ಸಿಗುವ ಸಾಧ್ಯತೆಯಿದೆ. ರಾಹುಲ್ ಜೊತೆಗೆ ಉತ್ತಮ ಬಾಂಧವ್ಯವಿಟ್ಟುಕೊಂಡಿರುವ ಗಂಭೀರ್ ಮುಂದೆ ಅವರನ್ನೇ ಏಕದಿನ ತಂಡದ ನಾಯಕನಾಗಿ ಮಾಡಲು ಲಾಬಿ ನಡೆಸಬಹುದು ಎಂಬುದು ರಾಹುಲ್ ಅಭಿಮಾನಿಗಳ ವಿಶ್ವಾಸ. ಹೀಗಾಗಿ ಗಂಭೀರ್ ಬಂದರೆ ರಾಹುಲ್ ಗೆ ಲಾಭ ಎನ್ನುವುದು ಅಭಿಮಾನಿಗಳ ಲೆಕ್ಕಾಚಾರ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments