Webdunia - Bharat's app for daily news and videos

Install App

ಕೆಎಲ್ ರಾಹುಲ್, ಮುರಳಿ ವಿಜಯ್ ಇನ್ನೂ ಟೀಂ ಇಂಡಿಯಾದಲ್ಲೇ ಯಾಕಿದ್ದಾರೆ?!

Webdunia
ಭಾನುವಾರ, 16 ಡಿಸೆಂಬರ್ 2018 (08:49 IST)
ಪರ್ತ್: ಕಳೆದ ಒಂದು ವರ್ಷದಿಂದ ಕಳಪೆ ಫಾರ್ಮ್ ನಲ್ಲಿದ್ದರೂ ನಿರಂತರವಾಗಿ ಅವಕಾಶ ಪಡೆಯುತ್ತಿರುವ ಕೆಎಲ್ ರಾಹುಲ್ ಮತ್ತು ಮುರಳಿ ವಿಜಯ್ ಬಗ್ಗೆ ಅಭಿಮಾನಿಗಳು ಸಿಕ್ಕಾಪಟ್ಟೆ ಸಿಟ್ಟಿಗೆದ್ದಿದ್ದಾರೆ.


ಈಗಾಗಲೇ ಕಳಪೆ ಫಾರ್ಮ್ ನಿಂದ ಸಾಕಷ್ಟು ಟ್ರೋಲ್ ಗೊಳಗಾಗಿರುವ ಕೆಎಲ್ ರಾಹುಲ್ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ 2 ರನ್ ಗೆ ಔಟಾದ ಬಳಿಕ ಅಭಿಮಾನಿಗಳ ಪಿತ್ತ ನೆತ್ತಿಗೇರಿದೆ. ಇನ್ನೂ ಈ ಆಟಗಾರನಿಗೆ ಯಾಕೆ ಅವಕಾಶ ಕೊಡಲಾಗುತ್ತಿದೆ. ಭಾರತದಲ್ಲಿ ಪ್ರತಿಭಾವಂತ ಕ್ರಿಕೆಟಿಗರಿಗೆ ಬರವೇ ಎಂಬ ಆಕ್ರೋಶ ಕೇಳಿಬರುತ್ತಿದೆ.

ಮುರಳಿ ವಿಜಯ್ ಗಿಂತ ಹೆಚ್ಚು ಟೀಕೆಗೊಳಗಾಗುತ್ತಿರುವುದು ಕೆಎಲ್ ರಾಹುಲ್. ರಾಹುಲ್ ಕಳೆದ 54 ಇನಿಂಗ್ಸ್ ಗಳಲ್ಲಿ 20 ಬಾರಿ ಸಿಂಗಲ್ ಡಿಜಿಟ್ ಗೆ ಔಟಾಗಿದ್ದಾರೆ. ಇದರಿಂದಾಗಿ ತಂಡ ಪ್ರತೀ ಬಾರಿಯೂ ಸಂಕಷ್ಟಕ್ಕೀಡಾಗುತ್ತಿದೆ.

ಇನ್ನು ಮುಂದೆ ರಾಹುಲ್, ವಿಜಯ್ ಬರೀ ಡ್ರಿಂಕ್ಸ್ ಒಯ್ಯಲು ತಂಡದಲ್ಲಿದ್ದರೆ ಸಾಕು. ಇವರಿಬ್ಬರೂ ಬಹುಶಃ ಪಿಯುಬಿಜಿ ಆನ್ ಲೈನ್ ಗೇಮ್ ಆಡಲು ತಂಡಕ್ಕೆ ಅಗತ್ಯ ವಿರಬೇಕು. ಅದಕ್ಕೆ ಇನ್ನೂ ಉಳಿಸಿಕೊಂಡಿದ್ದಾರೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೃತೀಯ ಟೆಸ್ಟ್ ವೇಳೆಗೆ ರೋಹಿತ್ ಶರ್ಮಾ, ಪೃಥ್ವಿ ಶಾ ಗಾಯದಿಂದ ಚೇತರಿಸಿಕೊಳ್ಳಲಿದ್ದು, ಆ ಸಂದರ್ಭದಲ್ಲಿ ಇಬ್ಬರೂ ತಂಡದಿಂದ ಕೊಕ್ ಪಡೆಯುವ ಸಾಧ್ಯತೆ ದಟ್ಟವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments