Webdunia - Bharat's app for daily news and videos

Install App

ಮೂರನೇ ಟೆಸ್ಟ್ ನಿಂದ ಕೆಎಲ್ ರಾಹುಲ್ ಔಟ್: ಮತ್ತೊಬ್ಬ ಕನ್ನಡಿಗನಿಗೆ ಅವಕಾಶ

Krishnaveni K
ಮಂಗಳವಾರ, 13 ಫೆಬ್ರವರಿ 2024 (08:25 IST)
Photo Courtesy: Twitter
ರಾಜ್ ಕೋಟ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಹೊರಬಿದ್ದಿದ್ದಾರೆ. ಗಾಯದಿಂದ ಚೇತರಿಸಿಕೊಳ್ಳದ ಕಾರಣ ಅವರನ್ನು ಹೊರಗಿಡಲಾಗಿದೆ.

ವಿಶೇಷವೆಂದರೆ ಓರ್ವ ಕನ್ನಡಿಗನ ಸ್ಥಾನಕ್ಕೆ ಮತ್ತೋರ್ವ ಕನ್ನಡಿಗನ ಆಗಮನವಾಗಿದೆ. ಕೆಎಲ್ ರಾಹುಲ್ ಸ್ಥಾನಕ್ಕೆ ರಣಜಿ ಟ್ರೋಫಿಯಲ್ಲಿ ಉತ್ತಮ ಫಾರ್ಮ್ ಪ್ರದರ್ಶಿಸಿದ್ದ ಕರ್ನಾಟಕ ತಂಡದ ದೇವದತ್ತ್ ಪಡಿಕ್ಕಲ್ ಗೆ ಅವಕಾಶ ನೀಡಲಾಗಿದೆ. ಹೀಗಾಗಿ ಕನ್ನಡಿಗನ ಸ್ಥಾನಕ್ಕೆ ಕನ್ನಡಿಗನೇ ಆಯ್ಕೆಯಾಗಿರುವುದು ವಿಶೇಷ ಎನ್ನಬಹುದು.

ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ಕೆಎಲ್ ರಾಹುಲ್ ದ್ವಿತೀಯ ಪಂದ್ಯದ ವೇಳೆ ತೊಡೆನೋವಿನಿಂದಾಗಿ ಹೊರಗುಳಿದಿದ್ದರು. ಬಳಿಕ ಕೊನೆಯ ಮೂರು ಪಂದ್ಯಗಳಿಗೆ ಮೊನ್ನೆಯಷ್ಟೇ ತಂಡ ಆಯ್ಕೆ ಮಾಡಲಾಗಿತ್ತು. ಆಗ ಫಿಟ್ನೆಸ್ ಸಾಬೀತುಪಡಿಸಿದರೆ ಕೆಎಲ್ ರಾಹುಲ್ ಗೆ ತಂಡದಲ್ಲಿ ಅವಕಾಶ ನೀಡಲಾಗಿತ್ತು.

ಮೊನ್ನೆಯಷ್ಟೇ ರಾಹುಲ್ ತಾವು ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದರು. ಇದರಿಂದಾಗಿ ರಾಹುಲ್ ಆಡುತ್ತಾರೆ ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ ಅವರು ಸಂಪೂರ್ಣ ಚೇತರಿಸಿಕೊಳ್ಳದ ಕಾರಣ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಸದ್ಯಕ್ಕೆ ಅವರು ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

ಈಗಾಗಲೇ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಿಂದ ಟೀಂ ಇಂಡಿಯಾ ಮಧ್ಯಮ ಕ್ರಮಾಂಕ ಬಡವಾಗಿದೆ. ಇದೀಗ ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಕಿರಿಯರೇ ಇಂಗ್ಲೆಂಡ್ ನಂತಹ ಪ್ರಬಲ ತಂಡವನ್ನು ಎದುರಿಸಬೇಕಿದೆ. ಸರಣಿ ಈಗ 1-1 ರಿಂದ ಸಮಬಲಗೊಂಡಿರುವುದರಿಂದ ಮುಂದಿನ ಪಂದ್ಯಗಳಲ್ಲಿ ತೀವ್ರ ಪೈಪೋಟಿಯಿರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments