Webdunia - Bharat's app for daily news and videos

Install App

ಕೆಎಲ್ ರಾಹುಲ್ ನಿವೃತ್ತಿ ಘೋಷಣೆ: ಘೋಷಣೆ ಮಾಡಬೇಕಿದೆ ಎಂದು ಇದೇನು ಹೀಗೆ ಹೇಳಿಬಿಟ್ಟರು ಕೆಎಲ್ ಫ್ಯಾನ್ಸ್ ಬೇಸರ

Krishnaveni K
ಶುಕ್ರವಾರ, 23 ಆಗಸ್ಟ್ 2024 (12:28 IST)
ಮುಂಬೈ: ಟೀಂ ಇಂಡಿಯಾ ಪ್ರತಿಭಾವಂತ ಕ್ರಿಕೆಟಿಗ ಕೆಎಲ್ ರಾಹುಲ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದರಾ? ಹೀಗೊಂದು ಅನುಮಾನ ಹುಟ್ಟಿಸುವಂತಹ ಪೋಸ್ಟ್ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಬೇಸರಗೊಂಡಿದ್ದಾರೆ.

ಕೆಎಲ್ ರಾಹುಲ್ ನಿನ್ನೆ ಸಂಜೆ ‘ಒಂದು ಘೋಷಣೆ ಮಾಡಬೇಕಿದೆ. ಕಾಯ್ತಾ ಇರಿ’ ಎಂದು ಪೋಸ್ಟ್ ಒಂದನ್ನು ಮಾಡಿದ್ದರು. ಇದರ ಬೆನ್ನಲ್ಲೇ ಅವರು ನಿವೃತ್ತಿ ಹೇಳಬಹುದಾ, ಆರ್ ಸಿಬಿಗೆ ಸೇರುವ ಬಗ್ಗೆ ಹೇಳಬಹುದಾ ಎಂದೆಲ್ಲಾ ಊಹಾಪೋಹಗಳು ಹರಿದಾಡಿದ್ದವು. ಇಂದು ರಾಹುಲ್ ಇನ್ ಸ್ಟಾ ಸ್ಟೋರಿಯಲ್ಲಿ ನಿವೃತ್ತಿ ಬಗ್ಗೆ ಘೋಷಣೆ ಮಾಡಿರುವ ಪೋಸ್ಟ್ ಒಂದು ವೈರಲ್ ಆಗಿದೆ.

ಸಾಕಷ್ಟು ಯೋಚಿಸಿದ ಬಳಿಕ ನಾನು ನನ್ನ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸುತ್ತಿದ್ದೇನೆ ಎಂದು ಆರಂಭವಾಗುವ ಸುದೀರ್ಘ ಪೋಸ್ಟ್ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈಗಲೇ ನಿವೃತ್ತಿ ಯಾಕೆ ಬೇಕಿತ್ತು ಎನ್ನುತ್ತಿದ್ದಾರೆ.

ಆದರೆ ಅಸಲಿ ಕತೆ ಬೇರೆಯೇ ಇದೆ. ಅಸಲಿಗೆ ಇಂತಹದ್ದೊಂದು ಸ್ಟೋರಿಯನ್ನು ರಾಹುಲ್ ಪೋಸ್ಟ್ ಮಾಡಿಯೇ ಇಲ್ಲ. ಯಾರೋ ನಿನ್ನೆ ರಾಹುಲ್ ಘೋಷಣೆ ಮಾಡಬೇಕಿದೆ ಎಂದಿದ್ದಕ್ಕೆ ಅವರದೇ ಸ್ಟೋರಿಯಲ್ಲಿ ಅವರು ನಿವೃತ್ತಿ ಮೆಸೇಜ್ ಬರೆದಿರುವಂತೆ ಎಡಿಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದಾರೆ. ಇದುವರೆಗೆ ರಾಹುಲ್ ಆಗಲೀ ಬಿಸಿಸಿಐ ಆಗಲೀ ಅವರ ನಿವೃತ್ತಿ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಯಾರೋ ಹರಡುತ್ತಿರುವ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments