Webdunia - Bharat's app for daily news and videos

Install App

ಕನ್ನಡದಲ್ಲಿ ಧನ್ಯವಾದ ಸಲ್ಲಿಸಿದ ಕೆಎಲ್ ರಾಹುಲ್: ಆರ್ ಸಿಬಿ ಬಾ ಮಗ ಎಂದ ಫ್ಯಾನ್ಸ್

Krishnaveni K
ಸೋಮವಾರ, 9 ಸೆಪ್ಟಂಬರ್ 2024 (11:09 IST)
ಬೆಂಗಳೂರು: ದುಲೀಪ್ ಟ್ರೋಫಿ ಪಂದ್ಯಾವಳಿಯಲ್ಲಿ ನಾಲ್ಕೂ ದಿನವೂ ಮೈದಾನದಲ್ಲಿ ತಮ್ಮನ್ನು ಬೆಂಬಲಿಸಿದ ಅಭಿಮಾನಿಗಳಿಗೆ ಕನ್ನಡಿಗ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಕನ್ನಡದಲ್ಲೇ ಧನ್ಯವಾದ ಸಲ್ಲಿಸಿದ್ದಾರೆ.

ದುಲೀಪ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತ ಎ ತಂಡದ ಪರ ಆಡಿದ ಕೆಎಲ್ ರಾಹುಲ್ ಬಿ ತಂಡದ ವಿರುದ್ಧ ಎರಡನೇ ಇನಿಂಗ್ಸ್ ನಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದರು. ಆದರೆ ದುರದೃಷ್ಟವಶಾತ್ ರಾಹುಲ್ ತಂಡ ಈ ಪಂದ್ಯವನ್ನು ಸೋತಿದೆ. ಹಾಗಿದ್ದರೂ ಎಲ್ಲಾ ದಿನಗಳಲ್ಲೂ ಮೈದಾನಕ್ಕೆ ಬಂದ ರಾಹುಲ್ ಅಭಿಮಾನಿಗಳು ತವರಿನ ಹುಡುಗನಿಗೆ ಚಿಯರ್ ಅಪ್ ಮಾಡಿದ್ದಾರೆ.

ಇದು ರಾಹುಲ್ ಹೃದಯ ತಟ್ಟಿದೆ. ಪಂದ್ಯದ ನಂತರ ಸೋಷಿಯಲ್ ಮೀಡಿಯಾದಲ್ಲಿ ಬೆಂಗಳೂರು ಎಂದು ಕನ್ನಡದಲ್ಲೇ ಬರೆದು ಧನ್ಯವಾದ ಸಲ್ಲಿಸಿದ್ದಾರೆ. ಇದಕ್ಕೆ ಸಾಕಷ್ಟು ಜನ ಕಾಮೆಂಟ್ ಮಾಡಿದ್ದು, ನೀವು ನಮ್ಮ ಕನ್ನಡದ ಹುಡುಗ, ಕರ್ನಾಟಕದ ಮನೆ ಮಗ ಎಂದಿದ್ದಾರೆ.

ಅನೇಕರು ಈ ಸಲ ಐಪಿಎಲ್ ನಲ್ಲಿ ಆರ್ ಸಿಬಿಗೆ ಬಾ ಮಗ ಎಂದು ಕರೆದಿದ್ದಾರೆ. ಮತ್ತೆ ಕೆಲವರು ರಾಹುಲ್ ತಮ್ಮ ಮೇಲಿನ ಅಭಿಮಾನಿಗಳ ಪ್ರೀತಿ ನೋಡಿಯಾದರೂ ಈ ಸಲ ಆರ್ ಸಿಬಿಗೆ ಬರೋದು ಪಕ್ಕಾ ಎಂದಿದ್ದಾರೆ. ವಿಶೇಷವೆಂದರೆ ರಾಹುಲ್ ಚಿನ್ನಸ್ವಾಮಿ ಮೈದಾನದಲ್ಲಿ ಆಡುತ್ತಿರುವಾಗ ಅಭಿಮಾನಿಗಳು ‘ಆರ್ ಸಿಬಿ ಮುಂದಿನ ಕ್ಯಾಪ್ಟನ್’ ಎಂದು ಕೂಗಿ ಹೇಳುತ್ತಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments