Webdunia - Bharat's app for daily news and videos

Install App

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

Krishnaveni K
ಗುರುವಾರ, 12 ಜೂನ್ 2025 (09:32 IST)
ಲಂಡನ್: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಲಿರುವ ಟೀಂ ಇಂಡಿಯಾದಲ್ಲಿ ಈ ಬಾರಿ ಕುಚಿಕು ಗೆಳೆಯರಾದ ಕೆಎಲ್ ರಾಹುಲ್ ಮತ್ತು ಕರುಣ್ ನಾಯರ್ ಇದ್ದಾರೆ. ಇದೀಗ ಆಂಗ್ಲರ ನೆಲದಲ್ಲಿ ಗೆಳೆಯನಿಂದಲೇ ಕೆಎಲ್ ರಾಹುಲ್ ಗೆ ಕುತ್ತು ಬರಲಿದೆಯಾ ಎಂಬ ಅನುಮಾನ ಶುರುವಾಗಿದೆ.

ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಈಗ ಯುವ ಆಟಗಾರರದ್ದೇ ದರ್ಬಾರ್. ಕೊಹ್ಲಿ-ರೋಹಿತ್ ನಿವೃತ್ತಿ ಬಳಿಕ ತಂಡಕ್ಕೆ ಹೊಸ ಆಟಗಾರರ ಆಗಮನವಾಗಿದೆ. ಶುಬ್ಮನ್ ಗಿಲ್ ನಾಯಕತ್ವದಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾಗೆ ಓಪನರ್ ಗಳಾಗಿ ಯಾರು ಆಡಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿದೆ.

ತಂಡದಲ್ಲಿ ಓಪನರ್ ಆಗಿ ಅನುಭವ ಇರುವ ಕೆಎಲ್ ರಾಹುಲ್, ಅಭಿಮನ್ಯು ಈಶ್ವರನ್, ಶುಬ್ಮನ್ ಗಿಲ್, ಕರುಣ್ ನಾಯರ್, ಯಶಸ್ವಿ ಜೈಸ್ವಾಲ್ ಇದ್ದಾರೆ. ರೋಹಿತ್ ಶರ್ಮಾ ನಿವೃತ್ತಿ ಬಳಿಕ ಜೈಸ್ವಾಲ್ ಜೊತೆ ಓಪನರ್ ಆಗಿ ಕಣಕ್ಕಿಳಿಯಲು ತಂಡ ಓರ್ವ ಆಟಗಾರನನ್ನು ಆಯ್ಕೆ ಮಾಡಬೇಕಿದೆ.

ಇವರಲ್ಲಿ ಕೆಎಲ್ ರಾಹುಲ್ ಗೆ ಓಪನಿಂಗ್ ಸ್ಥಾನದ ಮೇಲೆ ಕಣ್ಣಿದೆ. ಯಾಕೆಂದರೆ ರಾಹುಲ್ ಓಪನರ್ ಆಗಿದ್ದಾಗಲೆಲ್ಲಾ ಭರ್ಜರಿ ರನ್ ಗಳಿಸಿದ್ದಾರೆ. ಆದರೆ ಅವರಿಗೆ ಕರುಣ್ ನಾಯರ್ ನಿಂದಲೇ ಪೈಪೋಟಿ ಎದುರಾಗಿದೆ.

ಕರುಣ್ ಹಲವು ದಿನಗಳ ನಂತರ ಟೆಸ್ಟ್ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ದೇಶೀಯ ಕ್ರಿಕೆಟ್ ನಲ್ಲಿ ಮಾತ್ರವಲ್ಲದೆ, ಇತ್ತೀಚೆಗೆ ಇಂಗ್ಲೆಂಡ್ ನಲ್ಲಿ ಅಭ್ಯಾಸ ಪಂದ್ಯದಲ್ಲೂ ಉತ್ತಮ ಬ್ಯಾಟಿಂಗ್ ಮಾಡಿದ್ದಾರೆ. ಹೀಗಾಗಿ ಅವರು ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ. ಆದರೆ ಅವರನ್ನು ಓಪನರ್ ಆಗಿ ಕಣಕ್ಕಿಳಿಸಿದರೆ ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕಾಗುತ್ತದೆ. ಒಂದು ವೇಳೆ ಕರುಣ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದರೆ ಮಾತ್ರ ರಾಹುಲ್ ಗೆ ತಮ್ಮಿಷ್ಟದ ಓಪನರ್ ಸ್ಥಾನ ಸಿಗಲಿದೆ. ಸದ್ಯಕ್ಕೆ ಎಲ್ಲವೂ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಕೈಯಲ್ಲಿ ನಿರ್ಧಾರವಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments