Webdunia - Bharat's app for daily news and videos

Install App

ವಿಶ್ವಕಪ್ ಟಿಕೆಟ್ ಗಾಗಿ ನನಗೆ ಮೆಸೇಜ್ ಮಾಡಲೇಬೇಡಿ! ಗೆಳೆಯರಿಗೆ ವಾರ್ನ್ ಮಾಡಿದ ಕೆಎಲ್ ರಾಹುಲ್

Webdunia
ಮಂಗಳವಾರ, 26 ಸೆಪ್ಟಂಬರ್ 2023 (10:12 IST)
ಮುಂಬೈ: ಇನ್ನೇನು ಕೆಲವೇ ದಿನಗಳಲ್ಲಿ ಭಾರತದಲ್ಲಿ ಐಸಿಸಿ ಏಕದಿನ ವಿಶ್ವಕಪ್ ಆರಂಭವಾಗಲಿದೆ. ಭಾರತದ ವಿವಿಧ ತಾಣಗಳಲ್ಲಿ ನಡೆಯಲಿರುವ ವಿಶ್ವಕಪ್ ಪಂದ್ಯಾವಳಿಯ ಟಿಕೆಟ್ ಗಳು ಈಗಾಗಲೇ ಆನ್ ಲೈನ್ ನಲ್ಲಿ ಸೋಲ್ಡ್ ಔಟ್ ಆಗುತ್ತಿದೆ.

ಕ್ರಿಕೆಟಿಗರಿಗೆ ಎರಡು ಟಿಕೆಟ್ ಉಚಿತವಾಗಿ ಸಿಗುತ್ತದೆ. ಈ ಟಿಕೆಟ್ ನ್ನು ಅವರು ತಮ್ಮ ಆಪ್ತರಿಗೆ ನೀಡಬಹುದು. ಹೀಗಾಗಿ ಆಯಾ ಕ್ರಿಕೆಟಿಗರು ತಮ್ಮ ತವರಿನಲ್ಲಿ ಆಡುವಾಗ ತಮ್ಮ ಗೆಳೆಯರು, ಕುಟುಂಬದವರು ಟಿಕೆಟ್ ಗಾಗಿ ಬೇಡಿಕೆಯಿಡುವುದು ಸಾಮಾನ್ಯ.

ಇದೀಗ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಈ ಬಗ್ಗೆ ತಮಾಷೆಯಾಗಿ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ತಮ್ಮ ಗೆಳೆಯರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ‘ಯಾರೂ ನನಗೆ ಟಿಕೆಟ್ ಗಾಗಿ ಮೆಸೇಜ್ ಮಾಡಬೇಡಿ. ನಾನು ಅದಕ್ಕೆ ಪ್ರತಿಕ್ರಿಯೆಯನ್ನೂ ನೀಡುವುದಿಲ್ಲ. ಯಾಕೆಂದರೆ ನಾನು ನನ್ನ ಬ್ಯಾಟಿಂಗ್ ಬಗ್ಗೆ ಗಮನ ಕೇಂದ್ರೀಕರಿಸಬೇಕು’ ಎಂದಿದ್ದಾರೆ.  ಈಗಾಗಲೇ ತಮ್ಮ ಆಪ್ತರಿಂದ ಟಿಕೆಟ್ ಗಾಗಿ ಸಾಕಷ್ಟು ಬೇಡಿಕೆ ಬಂದಿರುವ ವಿಚಾರವನ್ನೂ ಅವರು ಹೊರಹಾಕಿದ್ದಾರೆ. ಆದರೆ ಯಾರಿಗೂ ನಾನು ಟಿಕೆಟ್ ಅರೇಂಜ್ ಮಾಡಿಕೊಡಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಮುಂದಿನ ಸುದ್ದಿ
Show comments