Webdunia - Bharat's app for daily news and videos

Install App

IND vs BAN test: ಕೆಎಲ್ ರಾಹುಲ್ ಗೆ ಮತ್ತೊಂದು ಚಾನ್ಸ್, ಸರ್ಫರಾಜ್ ಖಾನ್ ಗೆ ಬೆಂಚೇ ಗತಿ

Krishnaveni K
ಶುಕ್ರವಾರ, 27 ಸೆಪ್ಟಂಬರ್ 2024 (08:47 IST)
ಕಾನ್ಪುರ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಇಂದಿನಿಂದ ಆರಂಭವಾಗುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆಯಿಲ್ಲ.

ಕಳೆದ ಪಂದ್ಯವನ್ನು ಭಾರತ ಭರ್ಜರಿಯಾಗಿ ಗೆದ್ದುಕೊಂಡು ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಪಂದ್ಯವನ್ನು ಡ್ರಾ ಮಾಡಿಕೊಂಡರೂ ಸರಣಿ ಕೈವಶ ಮಾಡಿಕೊಳ್ಳುವುದರ ಜೊತೆಗೆ ಭಾರತ ಡಬ್ಲ್ಯುಟಿಸಿ ಶ್ರೇಯಾಂಕದಲ್ಲೂ ನಂ.1 ಸ್ಥಾನ ಉಳಿಸಿಕೊಳ್ಳಲಿದೆ.

ಆದರೆ ಕಾನ್ಪುರ ಪಿಚ್ ಸಾಮಾನ್ಯವಾಗಿ ವೇಗಿಗಳಿಗೆ ನೆರವು ನೀಡುತ್ತದೆ. ಹೀಗಾಗಿ ಇಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಕ್ಲಿಕ್ ಆಗಬಹುದು ಎಂಬ ನಿರೀಕ್ಷೆಯಿದೆ. ಹಾಗಿದ್ದರೂ ರವಿಚಂದ್ರನ್ ಅಶ್ವಿನ್-ರವೀಂದ್ರ ಜಡೇಜಾ ಸ್ಪಿನ್ ಜೋಡಿ ಭಾರತಕ್ಕೆ ಟೆಸ್ಟ್ ಪಂದ್ಯಗಳಲ್ಲಿ ಆಪತ್ ಬಾಂಧವರು.

ಕೇವಲ ಬೌಲಿಂಗ್ ನಲ್ಲಿ ಮಾತ್ರವಲ್ಲ, ಸಂಕಷ್ಟದ ಸಮಯದಲ್ಲಿ ಬ್ಯಾಟಿಂಗ್ ಕೂಡಾ ಮಾಡಿ ಭಾರತವನ್ನು ಈ ಇಬ್ಬರೂ ಕಾಪಾಡಬಲ್ಲರು. ಕಳೆದ ಪಂದ್ಯದಲ್ಲಿ ಭಾರತದ ಬಿಗ್ ಥ್ರೀ ಬ್ಯಾಟಿಗರಾದ ರೋಹಿತ್, ಕೊಹ್ಲಿ, ಕೆಎಲ್ ರಾಹುಲ್ ವಿಫಲರಾಗಿದ್ದರು. ಹಿಗಾಗಿ ಈ ಮೂವರೂ ಫಾರ್ಮ್ ಗೆ ಬರುವ ನಿರೀಕ್ಷೆಯಿದೆ. ಅದರಲ್ಲೂ ಕೆಎಲ್ ರಾಹುಲ್ ಗೆ ಮತ್ತೊಂದು ಚಾನ್ಸ್ ನೀಡಲು ಟೀಂ ಮ್ಯಾನೇಜ್ ಮೆಂಟ್ ಸಿದ್ಧವಾಗಿದ್ದು, ಸರ್ಫರಾಜ್ ಖಾನ್ ಮತ್ತೆ ಬೆಂಚ್ ಕಾಯಿಸಬೇಕಾದೀತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments