ಭಾರತ-ವಿಂಡೀಸ್ ಮೂರನೇ ಏಕದಿನ: ವಿಶ್ವದಾಖಲೆ ಮಾಡುವ ಕನಸಿನಲ್ಲಿ ಕುಲದೀಪ್ ಯಾದವ್

Webdunia
ಶನಿವಾರ, 27 ಅಕ್ಟೋಬರ್ 2018 (08:15 IST)
ಪುಣೆ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಪುಣೆಯಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಕುಲದೀಪ್ ಯಾದವ್ ವಿಶ್ವದಾಖಲೆ ಮಾಡುವ ಕನಸಿನಲ್ಲಿದ್ದಾರೆ.

ಈ ವರ್ಷ ಯಶಸ್ವಿ ಬೌಲರ್ ಎನಿಸಿದ್ದ ಕುಲದೀಪ್ ಯಾದವ್ ಇದುವರೆಗೆ ಒಟ್ಟು 16 ಪಂದ್ಯಗಳಿಂದ 39 ವಿಕೆಟ್ ಕಬಳಿಸಿದ್ದಾರೆ. ಇನ್ನು ಮೂರು ವಿಕೆಟ್ ಕಿತ್ತರೆ ಈ ವರ್ಷ ಅತ್ಯಂತ ಹೆಚ್ಚು ವಿಕೆಟ್ ಕಿತ್ತ ಇಂಗ್ಲೆಂಡ್ ನ ಆದಿಲ್ ರಶೀದ್ ದಾಖಲೆಯನ್ನು ಕುಲದೀಪ್ ಹಿಂದಿಕ್ಕಲಿದ್ದಾರೆ.

ಸದ್ಯಕ್ಕೆ ಟೀಂ ಇಂಡಿಯಾಕ್ಕೆ ಅಂತಹದ್ದೊಂದು ಬೌಲಿಂಗ್ ಪರ್ಫಾರ್ಮೆನ್ಸ್ ನ ಅಗತ್ಯವಿದೆ. ಕಳೆದೆರಡು ಪಂದ್ಯಗಳಲ್ಲಿ ಬೌಲರ್ ಗಳು ಮಂಕಾಗಿದ್ದು ಟೀಂ ಇಂಡಿಯಾ ತಲೆನೋವಿಗೆ ಕಾರಣವಾಗಿದೆ. ವಿಂಡೀಸ್ ನ ಹೋಪ್ ಮತ್ತು ಶಿಮ್ರೋನ್ ಹೆಟ್ ಮೇರ್ ಗೆ ಕಡಿವಾಣ ಹಾಕುವುದು ಭಾರತೀಯರಿಗೆ ಸವಾಲಾಗಿದೆ.

ಈ ಪಂದ್ಯಕ್ಕೆ ಖಾಯಂ ವೇಗಿಗಳಾದ ಭುವನೇಶ್ವರ್ ಕುಮಾರ್ ಮತ್ತು ಜಸ್ಪ್ರೀತ್ ಬುಮ್ರಾ ಮರಳಿರುವುದರಿಂದ ಬೌಲಿಂಗ್ ವಿಭಾಗಕ್ಕೆ ಬಲ ಬಂದಂತಾಗಿದೆ. ಇನ್ನು ಆರಂಭಿಕ ಶಿಖರ್ ಧವನ್ ಫಾರ್ಮ್ ಗೆ ಮರಳಲೇಬೇಕಿದೆ. ಕಳೆದ ಎರಡೂ ಪಂದ್ಯಗಳಲ್ಲಿ ಅವರು ವಿಫಲರಾಗಿದ್ದಾರೆ. ಇತ್ತ ಧೋನಿಯೂ ರನ್ ಗಳಿಸುವ ಒತ್ತಡದಲ್ಲಿದ್ದಾರೆ. ಟಾಸ್ ಗೆದ್ದರೆ ಮೊದಲು ಫೀಲ್ಡಿಂಗ್ ಆಯ್ದುಕೊಳ್ಳುವುದು ಉತ್ತಮ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

ಮುಂದಿನ ಸುದ್ದಿ
Show comments