Webdunia - Bharat's app for daily news and videos

Install App

ತಂಡದಿಂದ ರವಿಚಂದ್ರನ್ ಅಶ್ವಿನ್ ಹೊರಹೋಗಲು ನಾನು, ಚಾಹಲ್ ಕಾರಣರಲ್ಲ ಎಂದ ಕುಲದೀಪ್ ಯಾದವ್

Webdunia
ಮಂಗಳವಾರ, 5 ಮಾರ್ಚ್ 2019 (09:24 IST)
ಮುಂಬೈ: ಟೀಂ ಇಂಡಿಯಾದಲ್ಲಿ ಯುವ ಸ್ಪಿನ್ನರ್ ಗಳಾದ ಕುಲದೀಪ್ ಯಾದವ್ ಮತ್ತು ಯಜುವೇಂದ್ರ ಚಾಹಲ್ ಮಿಂಚಲು ತೊಡಗಿದ ಮೇಲೆ ಸೀಮಿತ ಓವರ್ ಗಳ ಪಂದ್ಯದಿಂದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ರನ್ನು ಸಂಪೂರ್ಣವಾಗಿ ಹೊರಗಿಡಲಾಗಿದೆ.


ಆದರೆ ಇದಕ್ಕೆ ನಾವಿಬ್ಬರೂ ಕಾರಣರಲ್ಲ ಎಂದು ಸ್ಪಿನ್ನರ್ ಕುಲದೀಪ್ ಯಾದವ್ ಹೇಳಿಕೊಂಡಿದ್ದಾರೆ. ರವೀಂದ್ರ ಜಡೇಜಾ ಮತ್ತು ಅಶ್ವಿನ್ ಹೊರಹೋಗಲು ನಾವು ಕಾರಣರಲ್ಲ. ಬದಲಾಗಿ ನಮಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡಿದ್ದೇವಷ್ಟೇ ಎಂದು ಸಂದರ್ಶನವೊಂದರಲ್ಲಿ ಕುಲದೀಪ್ ಹೇಳಿಕೊಂಡಿದ್ದಾರೆ.

ಇದೀಗ ವಿಶ್ವಕಪ್ ತಂಡದಲ್ಲೂ ಅಶ್ವಿನ್ ಗೆ ಸ್ಥಾನ ಸಿಗುವುದು ಅನುಮಾನವಾಗಿದೆ. ‘ನಾವ್ಯಾರನ್ನೂ ಹೊರಕಳಿಸಿಲ್ಲ. ನಮಗೆ ಸಿಕ್ಕ ಅವಕಾಶ ಬಳಸಿಕೊಂಡಿದ್ದೇವೆ. ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಮತ್ತು ಜಡೇಜಾ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ನಾವು ಅವರಿಂದ ಸಾಕಷ್ಟು ಕಲಿತಿದ್ದೇವೆ’ ಎಂದು ಕುಲದೀಪ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments