Webdunia - Bharat's app for daily news and videos

Install App

100 ನೇ ಟೆಸ್ಟ್ ಸಂಭ್ರಮದಲ್ಲಿರುವ ರವಿಚಂದ್ರನ್ ಅಶ್ವಿನ್ ಮೇಲೆ ಅಪವಾದ ಹೊರಿಸಿದ ಲಕ್ಷ್ಮಣ್ ಶಿವರಾಮಕೃಷ್ಣನ್

Krishnaveni K
ಗುರುವಾರ, 7 ಮಾರ್ಚ್ 2024 (09:33 IST)
ಧರ್ಮಶಾಲಾ: ಇಂದು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ 100 ನೇ ಟೆಸ್ಟ್ ಪಂದ್ಯದ ಸಾಧನೆ ಮಾಡುತ್ತಿರುವ ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮೇಲೆ ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಶಿವರಾಮಕೃಷ್ಣನ್ ಅಪವಾದವೊಂದನ್ನು ಹೊರಿಸಿದ್ದಾರೆ.

ಸೋಷಿಯಲ್ ಮೀಡಿಯಾ ಎಕ್ಸ್ ಮೂಲಕ ರವಿಚಂದ್ರನ್ ಅಶ್ವಿನ್ ಮೇಲೆ ಶಿವರಾಮಕೃಷ್ಣನ್ ಅಸಮಾಧಾನ ಹೊರಹಾಕಿದ್ದಾರೆ. ಹಿರಿಯ ಕ್ರಿಕೆಟಿಗರಾದ ತಮಗೆ ಅಶ್ವಿನ್ ಅಗೌರವ ತೋರಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ಶಿವರಾಮಕೃಷ್ಣನ್ ಅಪವಾದವೇನು ಇಲ್ಲಿ ನೋಡಿ.

ಅಶ್ವಿನ್ 100 ನೇ ಟೆಸ್ಟ್ ಪಂದ್ಯವಾಡುತ್ತಿರುವ ಹಿನ್ನಲೆಯಲ್ಲಿ ಅವರಿಗೆ ಸಂದೇಶ ಕಳುಹಿಸಿದ್ದಲ್ಲದೆ ಅಭಿನಂದನೆ ಸಲ್ಲಿಸಲು ಕರೆ ಕೂಡಾ ಮಾಡಿದ್ದೆ. ಆದರೆ ಅಶ್ವಿನ್ ಸಂದೇಶಕ್ಕೂ ಉತ್ತರಿಸಲಿಲ್ಲ. ಕಾಲ್ ಮಾಡಿದರೆ ಕಟ್ ಮಾಡಿದರು. ನಮ್ಮಂತಹ ಹಿರಿಯ ಕ್ರಿಕೆಟಿಗರಿಗೆ ಸಿಗುವ ಗೌರವವಿದು’ ಎಂದಿದ್ದಾರೆ.

ಇದಕ್ಕೆ ಮೊದಲು ಕಳೆದ ವರ್ಷ ಅಶ್ವಿನ್ ಬಗ್ಗೆ ಶಿವರಾಮಕೃಷ್ಣನ್ ಟೀಕೆ ವ್ಯಕ್ತಪಡಿಸಿದ್ದರು. ‘ಇಂತಹ ಬಿರುಕಿನ ಪಿಚ್ ನಲ್ಲಿ ಎಂಥಾ ಮೂರ್ಖನಿಗಾದರೂ ವಿಕೆಟ್ ಸಿಗಬಹುದು’ ಎಂದು ಅಶ್ವಿನ್ ಬಗ್ಗೆ ಟೀಕೆ ಮಾಡಿದ್ದರು. ಅಲ್ಲದೆ, ಅಶ್ವಿನ್ ಅತ್ಯಂತ ಅನ್ ಫಿಟ್, ಫೀಲ್ಡಿಂಗ್ ಮಾಡಲೂ ಲಾಯಕ್ಕಿಲ್ಲದ ಆಟಗಾರ ಎಂದೆಲ್ಲಾ ಟೀಕೆ ಮಾಡಿದ್ದರು. ಬಹುಶಃ ಇದೇ ಕಾರಣಕ್ಕೆ ಅಶ್ವಿನ್ ಕೂಡಾ ಶಿವರಾಮಕೃಷ್ಣನ್ ಕರೆಯನ್ನು ನಿರಾಕರಿಸಿದ್ದಾರೆ. ಆದರೆ 100 ನೇ ಟೆಸ್ಟ್ ಸಂಭ್ರಮದ ಹೊಸ್ತಿಲಲ್ಲೇ ಅಶ್ವಿನ್ ಬಗ್ಗೆ ಶಿವರಾಮಕೃಷ್ಣನ್ ಬಹಿರಂಗವಾಗಿ ಇಂತಹದ್ದೊಂದು ಅಪವಾದ ಹೊರಿಸಿರುವುದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments