ಮಯಾಂಕ್ ಅಗರ್ವಾಲ್ ಆರೋಗ್ಯದ ಲೇಟೆಸ್ಟ್ ಅಪ್ ಡೇಟ್

Krishnaveni K
ಬುಧವಾರ, 31 ಜನವರಿ 2024 (10:02 IST)
Photo Courtesy: Twitter
ಅಗರ್ತಲಾ: ವಿಮಾನ ಪ್ರಯಾಣ ವೇಳೆ ನೀರು ಕುಡಿದ ಬಳಿಕ ಅಸ್ವಸ್ಥರಾಗಿದ್ದ ಕರ್ನಾಟಕ ರಣಜಿ ಕ್ರಿಕೆಟ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ಆರೋಗ್ಯದ ಬಗ್ಗೆ ಲೇಟೆಸ್ಟ್ ಅಪ್ ಡೇಟ್ ಸಿಕ್ಕಿದೆ.

ಮಯಾಂಕ್ ಅಗರ್ವಾಲ್ ರನ್ನು ಅಗರ್ತಲಾದ ಐಎಲ್ ಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಐಸಿಯುವಿನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಮಯಾಂಕ್ ಸುಧಾರಿಸುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ‍್ಯತೆಯಿದೆ.

ಶುಕ್ರವಾರ ರೈಲ್ವೇಸ್ ತಂಡದ ವಿರುದ್ಧ ನಡೆಯಲಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಭಾಗಿಯಾಗಲು ಸೂರತ್ ವಿಮಾನ ಪ್ರಯಾಣ ಮಾಡುವಾಗ ನೀರು ಕುಡಿದ ನಂತರ ಮಯಾಂಕ್ ಅಸ್ವಸ್ಥರಾಗಿದ್ದರು. ತೀವ್ರ ವಾಂತಿ ಮತ್ತು ಗಂಟಲಲ್ಲಿ ಉರಿ ಕಾಣಿಸಿಕೊಂಡಿತ್ತು. ಹೀಗಾಗಿ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಯಾಂಕ್ ಆರೋಗ್ಯದ ಬಗ್ಗೆ ಅಭಿಮಾನಿಗಳೂ ಆತಂಕಿತರಾಗಿದ್ದರು. ಇದೀಗ ಮಯಾಂಕ್ ಸ್ಥಿತಿ ಸುಧಾರಿಸಿಕೊಳ್ಳುತ್ತಿದೆ ಎಂಬ ಸುದ್ದಿ ಅಭಿಮಾನಿಗಳಿಗೆ ನೆಮ್ಮದಿ ನೀಡಿದೆ. ಈಗಲೂ ವೈದ್ಯರು ಅವರನ್ನು ನಿಗಾದಲ್ಲಿರಿಸಿದ್ದಾರೆ. ನುರಿತ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ.

 ಹೆಲ್ತ್ ಬುಲೆಟಿನಲ್ಲಿ ಏನಿದೆ?
ಆಸ್ಪತ್ರೆ ಹೆಲ್ತ್ ಬುಲೆಟಿನ್ ಪ್ರಕಾರ ‘ಕರ್ನಾಟಕ ಕ್ರಿಕೆಟಿಗ ಮಯಾಂಕ್ ಅಗರ್ವಾಲ್  ಗಂಟಲ್ಲಿ ಕಿರಿ ಕಿರಿ ಅನುಭವ ಹಾಗೂ ತುಟಿಯ ಮೇಲೆ ಗುಳ್ಳೆಗಳು ಎದ್ದಿರುವುದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿರುವ ಆರೋಗ್ಯ ಇದೀಗ ಸ್ಥಿರವಾಗಿದೆ’ ಎಂದಿದೆ.

ಮುಂದಿನ ರಣಜಿ ಪಂದ್ಯಕ್ಕೆ ಅಲಭ್ಯ
ತೀವ್ರ ಅಸ್ವಸ್ಥರಾಗಿರುವ ಮಯಾಂಕ್ ಅಗರ್ವಾಲ್ ಚೇತರಿಸಿಕೊಂಡು ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾದರೂ ಮುಂದಿನ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಉಳಿದ ಆಟಗಾರರು ರಾಜ್ ಕೋಟ್ ಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ. ಮಯಾಂಕ್ ಜೊತೆಗೆ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಅಧಿಕಾರಿಗಳು ಮತ್ತು ತ್ರಿಪುರಾ ಕ್ರಿಕೆಟ್ ಸಂಸ್ಥೆ ಅಧಿಕಾರಿಗಳು ಇದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಟೀಂ ಇಂಡಿಯಾಗೆ ಅಫ್ಘಾನಿಸ್ತಾನದ ವಿರುದ್ಧ ಕ್ಲೀನ್ ಸ್ವೀಪ್ ಗುರಿ

ಶ್ರೇಯಾಂಕ ಪಾಟೀಲ್ ಅಂದುಕೊಂಡಿದ್ದು ಆಗಲೇ ಇಲ್ಲ: ವಿಶ್ವಕಪ್ ನಿಂದಲೇ ಔಟ್

IPL 2027: ಐಪಿಎಲ್ 2027 ರ ಆರಂಭಿಕ ದಿನಾಂಕ ಪ್ರಕಟಿಸಿದ ಬಿಸಿಸಿಐ; ಇಲ್ಲಿದೆ ಸಂಪೂರ್ಣ ಅಪ್‌ಡೇಟ್ಸ್

ಲಾರ್ಡ್ಸ್ ನಲ್ಲಿ ಭಾರತಕ್ಕೆ ವಿಶ್ವಕಪ್ ಗೆದ್ದುಕೊಡಬೇಕು ಎಂದಿದ್ದ ಶ್ರೇಯಾಂಕ ಪಾಟೀಲ್: ಇದೇನಾಗಿ ಹೋಯ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾಗೆ ಮತ್ತೊಂದು ಸುಲಭ ಜಯ

ಮುಂದಿನ ಸುದ್ದಿ
Show comments