ವಿಮಾನದಲ್ಲಿ ಅಸ್ವಸ್ಥರಾದ ಮಯಾಂಕ್ ಅಗರ್ವಾಲ್ ರಿಂದ ಪೊಲೀರಿಗೆ ದೂರು

Krishnaveni K
ಬುಧವಾರ, 31 ಜನವರಿ 2024 (11:39 IST)
ಅಗರ್ತಲಾ: ವಿಮಾನ ಪ್ರಯಾಣ ವೇಳೆ ನೀರು ಕುಡಿದು ಅಸ್ವಸ್ಥರಾದ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಪೊಲೀಸರಿಗೆ ದೂರು ನೀಡಿದ್ದಾರೆ.

ಶುಕ್ರವಾರ ರೈಲ್ವೇಸ್ ತಂಡದ ವಿರುದ್ಧ ನಡೆಯಲಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಭಾಗಿಯಾಗಲು ಸೂರತ್ ವಿಮಾನ ಪ್ರಯಾಣ ಮಾಡುವಾಗ ನೀರು ಕುಡಿದ ನಂತರ ಮಯಾಂಕ್ ಅಸ್ವಸ್ಥರಾಗಿದ್ದರು. ತೀವ್ರ ವಾಂತಿ ಮತ್ತು ಗಂಟಲಲ್ಲಿ ಉರಿ ಕಾಣಿಸಿಕೊಂಡಿತ್ತು. ಹೀಗಾಗಿ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ನಾಳೆ ಅವರು ಡಿಸ್ಚಾರ್ಜ್ ಆಗುವ ಸಾಧ‍್ಯತೆಯಿದೆ. ಹಾಗಿದ್ದರೂ ಅವರು ಮುಂದಿನ ರಣಜಿ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಹೀಗಾಗಿ ತಂಡದ ಜೊತೆ ಪ್ರಯಾಣಿಸದೇ ನೇರವಾಗಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಇದೀಗ ಘಟನೆ ಬಗ್ಗೆ ತನಿಖೆ ನಡೆಸಲು ಮಯಾಂಕ್ ತಮ್ಮ ಮ್ಯಾನೇಜರ್ ಮೂಲಕ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ಕೈಗೆತ್ತಿಕೊಳ್ಳುವುದಾಗಿ ಪಶ್ಚಿಮ ತ್ರಿಪುರ ಎಸ್ ಪಿ ಕಿರಣ್ ಕುಮಾರ್ ತಿಳಿಸಿದ್ದಾರೆ. ಇದೀಗ ಮಯಾಂಕ್ ಕುಡಿದ ನೀರಿನ ಬಾಟಲಿಯಲ್ಲಿ ಅನಾರೋಗ್ಯಕ್ಕೆ ಕಾರಣವಾಗುವಂತಹದ್ದು ಏನಿತ್ತು ಎಂದು ತನಿಖೆ ನಡೆಯಲಿದೆ.

ರಣಜಿ ಪಂದ್ಯಕ್ಕೆ ಅಲಭ್ಯ
ಶುಕ್ರವಾರ ರೈಲ್ವೇಸ್ ವಿರುದ್ಧ ನಡೆಯಲಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಮಯಾಂಕ್ ಭಾಗಿಯಾಗಬೇಕಾಗಿತ್ತು. ಆದರೆ ಅನಾರೋಗ್ಯದಿಂದಾಗಿ ಅವರು ಭಾಗಿಯಾಗುತ್ತಿಲ್ಲ. ಕರ್ನಾಟಕದ ಇತರೆ ಆಟಗಾರರು ರಾಜ್ ಕೋಟ್ ಗೆ ಪ್ರಯಾಣ ಬೆಳೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಕ್ನೋ ಸೂಪರ್‌ ಜೈಂಟ್ಸ್‌ ತಂಡವನ್ನು ಮಟ್ಟಹಾಕಿ ಆರ್‌ಸಿಬಿ ಹಿಂದಿಕ್ಕಿದ ರಾಜಸ್ಥಾನ ರಾಯಲ್ಸ್‌

ಮೈದಾನದಲ್ಲೇ ಸಿಗರೇಟು ಸೇದಿದ ಗುಜರಾತ್ ಬೌಲರ್ ಕಗಿಸೊ ರಬಾಡ: ಏನಿದು ವರ್ತನೆ Video

ಹೊಡೆದ್ಯಲ್ಲೋ ಮಗಾ.. ಅಭಿಷೇಕ್ ಶರ್ಮಾ ಸೆಂಚುರಿಗೆ ಅವರ ತಂದೆಯ ಖುಷಿ ನೋಡಿ Video

IPL 2026: ಅಭಿಷೇಕ್ ಶರ್ಮಾ ಸ್ಟೋಟಕ ಶತಕ: ಸನ್‌ರೈಸರ್ಸ್‌ ಹೈದರಾಬಾದ್‌ಗೆ ಹ್ಯಾಟ್ರಿಕ್‌ ಗೆಲುವು

IPL 2026: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಸಿಡಿಲಬ್ಬರದ ಶತಕ ಬಾರಿಸಿದ ಅಭಿಷೇಕ್‌ ಶರ್ಮಾ

ಮುಂದಿನ ಸುದ್ದಿ
Show comments