Webdunia - Bharat's app for daily news and videos

Install App

ಭಾರತ-ವೆಸ್ಟ್ ಇಂಡೀಸ್ ಕ್ರಿಕೆಟ್:ಕರ್ನಾಟಕದ ಹುಡುಗನಿಗೆ ಸಿಗದೇ ಹೋಯ್ತು ಅದೃಷ್ಟ!

Webdunia
ಶುಕ್ರವಾರ, 12 ಅಕ್ಟೋಬರ್ 2018 (07:00 IST)
ಹೈದರಾಬಾದ್: ಇಂದಿನಿಂದ ಇಲ್ಲಿ ಆರಂಭವಾಗಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ
ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕರ್ನಾಟಕ ಮೂಲದ ಮಯಾಂಕ್ ಅಗರ್ವಾಲ್ ಗೆ ಆಡುವ ಬಳಗದಲ್ಲಿ ಅವಕಾಶ ದೊರೆಯುವ ಸಾಧ್ಯತೆಯಿದೆ ಎಂದೇ ಹೇಳಲಾಗಿತ್ತ. ಆದರೆ ಅದೆಲ್ಲಾ ಹುಸಿಯಾಗಿದೆ.


ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿ ಆ ಸ್ಥಾನಕ್ಕೆ ಮಯಾಂಕ್ ರನ್ನು ಆಡಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು. ಹೇಗಿದ್ದರೂ ವಿಂಡೀಸ್ ದುರ್ಬಲ ಎದುರಾಳಿ ಎಂಬ ಕಾರಣಕ್ಕೆ ಟೀಂ ಇಂಡಿಯಾ ಅವಕಾಶ ಸಿಗದೇ ಇರುವ ಪ್ರತಿಭಾವಂತರಿಗೆ ಅವಕಾಶ ನೀಡಬಹುದಿತ್ತು. ಆದರೆ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಕರ್ನಾಟಕ ಪ್ರತಿಭಾವಂತ ಆಟಗಾರ ಮಯಾಂಕ್ ಜತೆಗೆ ಇಂಗ್ಲೆಂಡ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಹನುಮ ವಿಹಾರಿಯನ್ನೂ ಕಡೆಗಣಿಸಿದೆ.

ಆರಂಭಿಕರಾಗಿ ಕಳೆದ ಪಂದ್ಯದಲ್ಲಿ ವಿಫಲರಾದ ಕೆಎಲ್ ರಾಹುಲ್ ಗೆ ಭವಿಷ್ಯದ ದೃಷ್ಟಿಯಿಂದ ಈ ಪಂದ್ಯದಲ್ಲಿ ಉತ್ತಮ ಆರಂಭ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ. ಆಸ್ಟ್ರೇಲಿಯಾ ಸರಣಿಗೆ ಮೊದಲು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಯುವ ಆಟಗಾರರಿಗೆ ಅವಕಾಶ ನೀಡಬಹುದು ಎಂಬ ಲೆಕ್ಕಾಚಾರಗಳು ಈ ಮೂಲಕ ಹುಸಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments