Webdunia - Bharat's app for daily news and videos

Install App

ಕರ್ನಾಟಕ ತಂಡಕ್ಕೆ ಮರಳಿದ ಮಯಾಂಕ್ ಅಗರ್ವಾಲ್

Krishnaveni K
ಮಂಗಳವಾರ, 6 ಫೆಬ್ರವರಿ 2024 (15:47 IST)
ಬೆಂಗಳೂರು: ಇತ್ತೀಚೆಗಷ್ಟೇ ವಿಮಾನ ಪ್ರಯಾಣ ವೇಳೆ ನೀರು ಕುಡಿದು ಅಸ್ವಸ್ಥರಾಗಿದ್ದ ಕರ್ನಾಟಕ ಕ್ರಿಕೆಟ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ತಂಡಕ್ಕೆ ಮರಳಿದ್ದಾರೆ.

ಸೂರತ್ ಗೆ ವಿಮಾನ ಯಾನ ಮಾಡುವಾಗ ಮಯಾಂಕ್ ಕಲುಷಿತ ನೀರು ಸೇವಿಸಿ ವಿಮಾನದಲ್ಲೇ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಅಗರ್ತಲಾದಲ್ಲಿ ಆಸ್ಪತ್ರೆಗೆ ದಾಖಲಿಸಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಎರಡು ದಿನದ ಬಳಿಕ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಹೀಗಾಗಿ ಕಳೆದ ರೈಲ್ವೇಸ್ ವಿರುದ್ಧದ ಪಂದ್ಯದಿಂದ ಅವರು ಹೊರಗುಳಿದಿದ್ದರು.

ಮಯಾಂಕ್ ಕಮ್ ಬ್ಯಾಕ್
ಇದೀಗ ಚೇತರಿಸಿಕೊಂಡಿರುವ ಮಯಾಂಕ್ ಮತ್ತೆ ತಂಡವನ್ನು ಕೂಡಿಕೊಂಡಿದ್ದಾರೆ. ಮುಂದಿನ ತಮಿಳುನಾಡು ವಿರುದ್ಧದ ಪಂದ್ಯಕ್ಕಾಗಿ 16 ಸದಸ್ಯರ ತಂಡ ಪ್ರಕಟಿಸಲಾಗಿದ್ದು ಮಯಾಂಕ್ ಮರಳಿ ತಂಡಕ್ಕೆ ವಾಪಸ್ ಆಗಿದ್ದಾರೆ. ಮತ್ತೆ ಅವರು ನಾಯಕರಾಗಿ ತಂಡ ಮುನ್ನಡೆಸಲಿದ್ದಾರೆ.

ಕೇವಲ ಮಯಾಂಕ್ ಮಾತ್ರವಲ್ಲ, ಮುಂದಿನ ಪಂದ್ಯಕ್ಕೆ ಕರ್ನಾಟಕ ತಂಡಕ್ಕೆ ಸ್ಟಾರ್ ಆಟಗಾರ ದೇವದತ್ತ್ ಪಡಿಕ್ಕಲ್ ಮತ್ತು ಕಾವೇರಪ್ಪ ಕೂಡಾ ವಾಪಸ್ ಆಗಿದ್ದಾರೆ. ಭಾರತ ಎ ತಂಡದ ಭಾಗವಾಗಿದ್ದ ಇವರು ಈಗ ಮತ್ತೆ ತಂಡ ಕೂಡಿಕೊಂಡಿದ್ದು, ಕರ್ನಾಟಕ ತಂಡ ಮತ್ತಷ್ಟು ಬಲಿಷ್ಠವಾಗಿದೆ.

ಫೆಬ್ರವರಿ 9 ರಿಂದ ಕರ್ನಾಟಕ ಮತ್ತು ತಮಿಳುನಾಡು ನಡುವೆ ಚೆನ್ನೈನ ಎಂ.ಎ. ಚಿದಂಬರಂ ಮೈದಾನದಲ್ಲಿ ರಣಜಿ ಟ್ರೋಫಿ ಪಂದ್ಯ ನಡೆಯಲಿದೆ. ದಕ್ಷಿಣ ಭಾರತದ ಎರಡು ಬಲಿಷ್ಠ ತಂಡಗಳ ನಡುವಿನ ಕಾದಾಟ ಕುತೂಹಲಕಾರಿಯಾಗಿರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments