ಬಿಸಿಸಿಐಗೆ ಮಿಥಾಲಿ ರಾಜ್ ಬರೆದ ಸೀಕ್ರೆಟ್ ಈಮೇಲ್ ಸೋರಿಕೆ: ಇದೀಗ ಮತ್ತೊಂದು ವಿವಾದ

Webdunia
ಬುಧವಾರ, 28 ನವೆಂಬರ್ 2018 (09:50 IST)
ಮುಂಬೈ: ಮಹಿಳಾ ಟಿ20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ರನ್ನು ಕಡೆಗಣಿಸಿದ ನಂತರ ಎದ್ದಿರುವ ವಿವಾದ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಅದಕ್ಕಿಂತ ಮೊದಲೇ ಮತ್ತೊಂದು ವಿವಾದ ಸೇರಿಕೊಂಡಿದೆ.


ಬೇಕೆಂದೇ ಪ್ರಮುಖ ಪಂದ್ಯಕ್ಕೆ ಫಾರ್ಮ್ ನಲ್ಲಿದ್ದ, ಹಿರಿಯ ಅನುಭವಿ ಆಟಗಾರ್ತಿ ಮಿಥಾಲಿ ರಾಜ್ ರನ್ನು ಕೈ ಬಿಡಲಾಯಿತು ಎಂಬ ಆರೋಪಗಳ ಬೆನ್ನಲ್ಲೇ ಮಿಥಾಲಿ ಮತ್ತು ನಾಯಕಿ ಹರ್ಮನ್ ಪ್ರೀತ್ ರನ್ನು ಕರೆಸಿಕೊಂಡು ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ ವಿಚಾರಣೆ ನಡೆಸಿದ್ದರು.

ಅದರ ಬೆನ್ನಲ್ಲೇ ಮಿಥಾಲಿ ರಾಜ್ ಬಿಸಿಸಿಐಗೆ ಈಮೇಲ್ ಒಂದನ್ನು ರವಾನಿಸಿ ತನ್ನನ್ನು ಕೋಚ್ ರಮೇಶ್ ಪವಾರ್, ನಾಯಕಿ ಹರ್ಮನ್ ಪ್ರೀತ್ ಕೌರ್ ಮತ್ತು ಬಿಸಿಸಿಐ ಅಧಿಕಾರಿ ಡಿಯಾನ ಎಡುಲ್ಜಿ ಕಡೆಗಣಿಸಲು ವ್ಯವಸ್ಥಿತವಾಗಿ ತಂತ್ರ ಹೆಣೆದಿದ್ದರು ಎಂದು ಆರೋಪಿಸಿದ್ದರು. ಈ ಈಮೇಲ್ ಇದೀಗ ಮಾಧ್ಯಮಗಳಿಗೆ ಸೋರಿಕೆಯಾಗಿದ್ದು, ಇದರ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಅಮಿತಾಭ್ ಚೌಧರಿ ಸಿಟ್ಟಿಗೆದ್ದಿದ್ದಾರೆ.

ಖಾಸಗಿಯಾಗಿ ಬಿಸಿಸಿಐ ಅಧಿಕಾರಿಗಳಿಗೆ ಮಿಥಾಲಿ ರಾಜ್ ಬರೆದ ಪತ್ರ ಸೋರಿಕೆಯಾಗಿದ್ದು ಹೇಗೆ ಎಂಬ ವಿಚಾರಣೆ ನಡೆಸುವಂತೆ ಅವರು ಸಿಇಒ ರಾಹುಲ್ ಜೋಹ್ರಿ ಮತ್ತು ಜನರಲ್ ಮ್ಯಾನೇಜರ್ ಸಬಾ ಕರೀಂಗೆ ಆದೇಶಿಸಿದ್ದಾರೆ. ಹೀಗಾಗಿ ಮಿಥಾಲಿ ವಿವಾದಕ್ಕೆ ಮತ್ತೊಂದು ತಿರುವು ಸಿಕ್ಕಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments