Webdunia - Bharat's app for daily news and videos

Install App

ನಾನು ಹೇಳೋವರೆಗೂ ನಂಬಬೇಡಿ: ಸುಳ್ಳು ಸುದ್ದಿ ಬಗ್ಗೆ ಗರಂ ಆದ ಕ್ರಿಕೆಟಿಗ ಮೊಹಮ್ಮದ್ ಶಮಿ

Krishnaveni K
ಗುರುವಾರ, 3 ಅಕ್ಟೋಬರ್ 2024 (16:28 IST)
ಕೋಲ್ಕತ್ತಾ: ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ತಮ್ಮ ಬಗ್ಗೆ ಹರಡಿರುವ ಸುಳ್ಳು ಸುದ್ದಿ ಬಗ್ಗೆ ಗರಂ ಆಗಿದ್ದು, ನಾನು ಹೇಳುವವರೆಗೂ ಯಾವುದನ್ನೂ ನಂಬಬೇಡಿ ಎಂದು ಖಡಕ್ ಆಗಿ ಹೇಳಿದ್ದಾರೆ.

ಮೊಹಮ್ಮದ್ ಶಮಿ ಕಳೆದ ಏಕದಿನ ವಿಶ್ವಕಪ್ ಬಳಿಕ ಗಾಯದಿಂದಾಗಿ ಕ್ರಿಕೆಟ್ ನಿಂದ ದೂರವೇ ಇದ್ದಾರೆ. ಇದರ ನಡುವೆ ಅವರು ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದು, ಬೌಲಿಂಗ್ ಆರಂಭಿಸಿದ್ದಾರೆ. ಆದರೆ ಇನ್ನೂ ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಿಲ್ಲ.

ಇದರ ನಡುವೆ ಅವರಿಗೆ ಮೊಣಕಾಲಿನ ಸಮಸ್ಯೆ ಕಾಣಿಸಿಕೊಂಡಿದೆ, ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಅಲಭ್ಯರಾಗಲಿದ್ದಾರೆ ಎಂದು ಕೆಲವು ಮಾಧ್ಯಮಗಳು ನಿನ್ನೆಯಿಡೀ ವರದಿ ಮಾಡಿದ್ದವು. ಈ ವರದಿ ಮೊಹಮ್ಮದ್ ಶಮಿ ಗಮನಕ್ಕೂ ಬಂದಿದೆ. ಇದರ ಬಗ್ಗೆ ಅವರು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.

ಇದೆಲ್ಲಾ ಸುಳ್ಳು ಸುದ್ದಿ, ನಾನು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಇರಲ್ಲ ಎಂದು ಇದುವರೆಗೆ ಹೇಳಿಲ್ಲ. ನಾನು ಅಥವಾ ಬಿಸಿಸಿಐ ಅಧಿಕೃತವಾಗಿ ಹೇಳುವವರೆಗೂ ಯಾವುದೇ ಸುಳ್ಳು ಸುದ್ದಿಗಳನ್ನು ನಂಬಬೇಡಿ. ನಾನು ಈಗಾಗಲೇ ಟ್ರೈನಿಂಗ್ ಆರಂಭಿಸಿದ್ದೇನೆ. ಕಮ್ ಬ್ಯಾಕ್ ಮಾಡಲಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments