Webdunia - Bharat's app for daily news and videos

Install App

ಟೀಂ ಇಂಡಿಯಾದಲ್ಲಿ ಮುಂಬೈ ಇಂಡಿಯನ್ಸ್ ಆಟಗಾರರಿಗೆ ಮಾತ್ರ ಅವಕಾಶ ಸಿಗುತ್ತಿದೆಯಾ?!

Webdunia
ಶನಿವಾರ, 5 ಆಗಸ್ಟ್ 2023 (08:10 IST)
ಮುಂಬೈ: ಟೀಂ ಇಂಡಿಯಾದಲ್ಲಿ ಆಟಗಾರರ ಆಯ್ಕೆ ಬಗ್ಗೆ ಇತ್ತೀಚೆಗೆ ಅಭಿಮಾನಿಗಳಿಂದ ತೀವ್ರ ಆಕ್ರೋಶ ಕೇಳಿಬರುತ್ತಿದೆ. ಅದರಲ್ಲೂ ಮುಂಬೈ ಇಂಡಿಯನ್ಸ್ ಆಟಗಾರರಿಗೇ ಹೆಚ್ಚು ಅವಕಾಶ, ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಬಳಿಕ ಟಿ20 ಸರಣಿಯಲ್ಲೂ ತಂಡದ ಆಯ್ಕೆಯಲ್ಲಿ ಮುಂಬೈ ಆಟಗಾರರಿಗೆ ಹೆಚ್ಚು ಅವಕಾಶ ನೀಡಲಾಗಿದೆ ಎಂಬುದು ನೆಟ್ಟಿಗರ ಆರೋಪ. ಯಶಸ್ವಿ ಜೈಸ್ವಾಲ್ ರಾಜಸ್ಥಾನ್ ಪರ ಐಪಿಎಲ್ ಆಡುತ್ತಾರೆ. ಅವರು ಇತ್ತೀಚೆಗೆ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಆದರೆ ಟಿ20 ಸರಣಿಯಲ್ಲಿ ಅವರಿಗೆ ಅವಕಾಶವೇ ನೀಡಿಲ್ಲ. ಅವರ ಬದಲು ಮುಂಬೈ ಪರ ಆಡುವ ತಿಲಕ್ ವರ್ಮಗೆ ಅವಕಾಶ ನೀಡಲಾಗಿದೆ.

ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ರನ್ನು ಕಡೆಗಣಿಸಿ ಇಶಾನ್ ಕಿಶನ್ ಗೆ ಅವಕಾಶ ನೀಡಲಾಗುತ್ತಿದೆ. ಅಷ್ಟೇ ಅಲ್ಲ, ಅಗ್ರ ಕ್ರಮಾಂಕದಲ್ಲಿ ಉತ್ತಮವಾಗಿ ಆಡುವ ಸಂಜುರನ್ನು ಕೆಳ ಕ್ರಮಾಂಕದಲ್ಲಿ ಆಡಿಸಲಾಗುತ್ತದೆ. ಇಶಾನ್ ಗೆ ಆರಂಭಿಕರಾಗಿ ಅವಕಾಶ ನೀಡಲಾಗುತ್ತದೆ. ಸೂರ್ಯಕುಮಾರ್ ಯಾದವ್ ಎಷ್ಟೇ ವಿಫಲರಾದರೂ ಅವರಿಗೆ ಮತ್ತೆ ಮತ್ತೆ ಅವಕಾಶ ನೀಡಲಾಗುತ್ತಿದೆ. ನಾಯಕ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ಪರ ಐಪಿಎಲ್ ಆಡುವುದರಿಂದ ಇತ್ತೀಚೆಗೆ ಮುಂಬೈ ಇಂಡಿಯನ್ಸ್ ಆಟಗಾರರಿಗೇ ಟೀಂ ಇಂಡಿಯಾದಲ್ಲಿ ಮಣೆ ಹಾಕಲಾಗುತ್ತಿದೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಭಿಷೇಕ್ ಬಚ್ಚನ್ ಔಟ್ ಮಾಡಿ ಎಂದ ಶೊಯೇಬ್ ಅಖ್ತರ್: ಬಚ್ಚನ್ ಫನ್ನಿ ರಿಯಾಕ್ಷನ್ ನೋಡಿ

Asia Cup Cricket: ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್

ಹೊಡೆದೇ ಹಾಕ್ತೀವಿ: ಏಷ್ಯಾ ಕಪ್ ಫೈನಲ್ ಗೆ ಮುನ್ನ ಭಾರತದ ಬಗ್ಗೆ ಪಾಕಿಸ್ತಾನಿಯರ ವೀರಾವೇಷದ ಮಾತುಗಳು

IND vs SL: ದಸನು ಶಾನಕ ಮಾಡಿದ ಆ ತಪ್ಪಿನಿಂದ ಟೀಂ ಇಂಡಿಯಾಗೆ ಗೆಲುವು

Asia Cup: ಶ್ರೀಲಂಕಾಗೆ ಬಿಗ್ ಟಾರ್ಗೆಟ್ ನೀಡಿದ ಭಾರತ

ಮುಂದಿನ ಸುದ್ದಿ
Show comments