ರೋಹಿತ್ ಶರ್ಮಾಗೆ ಮೋಸ! ಒಗ್ಗಟ್ಟಾದ ಮುಂಬೈ ಇಂಡಿಯನ್ಸ್ ಆಟಗಾರರು?!

Webdunia
ಭಾನುವಾರ, 17 ಡಿಸೆಂಬರ್ 2023 (11:06 IST)
Photo Courtesy: Twitter
ಮುಂಬೈ: ಯಾರೇ ಬಂದರೂ ಈ ಬಾರಿ ಐಪಿಎಲ್ ನಲ್ಲಿ ರೋಹಿತ್ ಶರ್ಮಾರೇ ನಾಯಕರಾಗಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದೇ ಎಲ್ಲರ ನಂಬಿಕೆಯಾಗಿತ್ತು.

ಆದರೆ ಕೊನೆಯ ಕ್ಷಣದಲ್ಲಿ ಹಾರ್ದಿಕ್ ಪಾಂಡ್ಯರನ್ನು ಕರೆತಂದು ದಿಡೀರ್ ಆಗಿ ರೋಹಿತ್ ರನ್ನು ಕಿತ್ತುಹಾಕಿ ಪಾಂಡ್ಯಗೆ ನಾಯಕತ್ವ ಪಟ್ಟ ನೀಡಿದ್ದು, ಮುಂಬೈ ತಂಡದೊಳಗೇ ಭಿನ್ನಮತ ಸ್ಪೋಟಗೊಳ್ಳುವಂತೆ ಮಾಡಿದೆ ಎಂದು ವರದಿಯಾಗುತ್ತಿದೆ.

ರೋಹಿತ್ ರನ್ನು ನಾಯಕತ್ವದಿಂದ ಕೆಳಗಿಳಿಸಿದ ಬೆನ್ನಲ್ಲೇ ಬುಮ್ರಾ, ಸೂರ್ಯಕುಮಾರ್ ಯಾದವ್ ಇನ್ ಸ್ಟಾಗ್ರಾಂ ಮೂಲಕ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು. ಆದರೆ ವಿವಾದವಾಗುತ್ತಿದ್ದಂತೇ ಬುಮ್ರಾ ಸಂದೇಶ ಡಿಲೀಟ್ ಮಾಡಿದ್ದರು. ಆದರೆ ಸೂರ್ಯ ಚೂರಾದ ಹೃದಯದ ಇಮೋಜಿ ಹಾಕಿಕೊಂಡಿದ್ದರು.

ರೋಹಿತ್ ಗೆ ಯಾವುದೇ ಮುನ್ಸೂಚನೆ ಇಲ್ಲದೇ ಮುಂಬೈ ಫ್ರಾಂಚೈಸಿ ನಾಯಕತ್ವದಿಂದ ಕೆಳಗಿಳಿಸಿ ಮೋಸ ಮಾಡಿತಾ ಎಂಬ ಅನುಮಾನ ಮೂಡುತ್ತಿದೆ. ಇದೇ ಕಾರಣಕ್ಕೆ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಟೀಂ ಇಂಡಿಯಾ ಆಟಗಾರರು ಫ್ರಾಂಚೈಸಿ ವಿರುದ್ಧವೇ ಅಸಮಾಧಾನಗೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.

ಇದೀಗ ಏನೇ ಅಸಮಾಧಾನವಿದ್ದರೂ ಟ್ರೇಡಿಂಗ್ ವಿಂಡೋ ಮುಗಿದಿದ್ದು, ರಿಲೀಸ್ ಮಾಡುವ ಆಟಗಾರರ ಪಟ್ಟಿಯೂ ಅಂತಿಮಗೊಳಿಸಲಾಗಿದೆ. ಈ ಹಂತದಲ್ಲಿ ಯಾವುದೇ ಆಟಗಾರರಿಗೂ ತಂಡದಿಂದ ಹೊರನಡೆಯಲು ಸಾಧ್ಯವಾಗದ ಸಂದಿಗ್ಧ ಪರಿಸ್ಥಿತಿಯಿದೆ.

ಇನ್ನೊಂದು ಮೂಲಗಳ ಪ್ರಕಾರ ಹಾರ್ದಿಕ್ ಪಾಂಡ್ಯ ಮುಂಬೈಗೆ ಮರಳುವ ಮೊದಲು ತಮಗೆ ನಾಯಕತ್ವ ನೀಡಿದರೆ ಮಾತ್ರ ಮರಳುವುದಾಗಿ ಷರತ್ತು ಹಾಕಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಅವರಿಗೆ ನಾಯಕತ್ವ ನೀಡಲಾಗಿದೆ ಎಂಬ ಸುದ್ದಿಯೂ ಇದೆ. ಆದರೆ ಸೂರ್ಯ, ಬುಮ್ರಾ, ಇಶಾನ್ ಸೇರಿದಂತೆ ತಂಡದ ಪ್ರಮುಖ ಆಟಗಾರರು ರೋಹಿತ್ ಗೆ ನಿಷ್ಠರಾಗಿದ್ದಾರೆ. ಹೀಗಿರುವಾಗ ಈ ಬಾರಿ ಮುಂಬೈ ಒಗ್ಗಟ್ಟಾಗಿ ಆಡುವುದು ಹೇಗೆ ಎಂಬ ಪ್ರಶ್ನೆ ಮೂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments