Webdunia - Bharat's app for daily news and videos

Install App

ಬಿಸಿಸಿಐ ಅಧಿಕಾರಿಗಳ ಮೇಲೆ ಗೂಢಚರ್ಯೆಗೆ ಶ್ರೀನಿವಾಸನ್ 14 ಕೋಟಿ ನೀಡಿದರೇ?

Webdunia
ಸೋಮವಾರ, 27 ಏಪ್ರಿಲ್ 2015 (13:48 IST)
ಬಿಸಿಸಿಐ ಮಾಜಿ ಅಧ್ಯಕ್ಷ ಎನ್. ಶ್ರೀನಿವಾಸನ್ ಸುತ್ತ ಸದಾ ವಿವಾದಗಳ ಹುತ್ತ ಆವರಿಸಿದ್ದು,  ಮಂಡಳಿಯ ಅಧ್ಯಕ್ಷರಾಗಿದ್ದಾಗ ಇತರೆ ಬಿಸಿಸಿಐ ಸದಸ್ಯರ ಮೇಲೆ ಬೇಹುಗಾರಿಕೆ ನಡೆಸಲು ಮಂಡಳಿಯ 14 ಕೋಟಿ ರೂ. ಹಣವನ್ನು ಲಂಡನ್ ಮೂಲಕ ಖಾಸಗಿ ಸಂಸ್ಥೆಗೆ ಕೊಟ್ಟಿದ್ದರೆಂಬ ಸಂಗತಿ ವರದಿಯಾಗಿದೆ.  ಬಿಸಿಸಿಐ ಹೊಸ ಅಧ್ಯಕ್ಷ ಜಗ್‌ಮೋಹನ್ ದಾಲ್ಮಿಯಾ ನೇತೃತ್ವದಲ್ಲಿ ಮೊದಲ ಕಾರ್ಯಕಾರಿ ಸಮಿತಿ ಸಭೆಯನ್ನು ಭಾನುವಾರ ನಡೆಸಿತು.  ಭಾರತದ ನೂತನ ಕೋಚ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಕಡಿಮೆ ಮೌಲ್ಯೀಕರಣವನ್ನು ಕುರಿತು ಸಭೆಯಲ್ಲಿ ಚರ್ಚಿಸಿತು.
 
 ಸಿಎಸ್‌ಕೆಯ ಆಸ್ತಿಯನ್ನು ಕಡಿಮೆ ಮೌಲ್ಯೀಕರಣ ಮಾಡಿದ ಘಟನೆ ಮತ್ತು ಬಿಸಿಸಿಐ ಸದಸ್ಯರ ಫೋನ್ ಕದ್ದಾಲಿಕೆ ಮತ್ತು ಖಾಸಗಿ ಈಮೇಲ್‌ಗಳ ಜಾಡು ಹಿಡಿದ ಕೃತ್ಯಕ್ಕಾಗಿ ಬಿಸಿಸಿಐ ಅಧಿಕಾರಿಗಳು ತಮ್ಮ ಅಸಮಾಧಾನ ಹೊರಹಾಕಿದರು ಎಂದು ತಿಳಿದುಬಂದಿದೆ. 
 
 ಬಿಸಿಸಿಐ ಅಧಿಕಾರಿಗಳ ಮೇಲೆ ಗೂಢಚರ್ಯೆ ನಡೆಸಿದ ಪ್ರಕರಣದ ಬಗ್ಗೆ ಬಿಸಿಸಿಐ ತನಿಖೆ ನಡೆಸುವ ನಿರೀಕ್ಷೆಯಿದ್ದು, ಕಾರ್ಯದರ್ಶಿ ಅನುರಾಗ್ ಠಾಕುರ್ ತನಿಖಾ ಸಮಿತಿಯ ನೇತೃತ್ವ ವಹಿಸಬಹುದೆಂದು ಹೇಳಲಾಗುತ್ತಿದೆ. 
 
2009ರಿಂದ ಆರಂಭಿಸಲಾದ ಚಾಂಪಿಯನ್ಸ್ ಲೀಗ್ ಟಿ20 ಪಂದ್ಯಾವಳಿಯ ಭವಿಷ್ಯವನ್ನು ಕುರಿತು ಬಿಸಿಸಿಐ ಚರ್ಚೆ ನಡೆಸಿತು. ಈ ಪಂದ್ಯಾವಳಿಯು ಅಷ್ಟೊಂದು ಯಶಸ್ವಿಯಾಗದೇ ನಷ್ಟ ಉಂಟುಮಾಡಿತ್ತು. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments