Webdunia - Bharat's app for daily news and videos

Install App

ಕೆಎಲ್ ರಾಹುಲ್ ಡಕೌಟ್ ಆಗಿದ್ದಕ್ಕೆ ಗೌತಮ್ ಗಂಭೀರ್ ಮೇಲೆ ಸಿಟ್ಟು

Krishnaveni K
ಸೋಮವಾರ, 5 ಆಗಸ್ಟ್ 2024 (10:58 IST)
Photo Credit: Facebook
ಕೊಲಂಬೊ: ಶ್ರೀಲಂಕಾ ವಿರುದ್ಧ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಗ ಕೆಎಲ್ ರಾಹುಲ್ ಶೂನ್ಯಕ್ಕೆ ಔಟಾಗಿದ್ದಕ್ಕೆ ಅಭಿಮಾನಿಗಳ ಸಿಟ್ಟು ಕೋಚ್ ಗೌತಮ್ ಗಂಭೀರ್ ಮೇಲೆ ತಿರುಗಿದೆ.

ಹಲವು ದಿನಗಳ ನಂತರ ಕೆಎಲ್ ರಾಹುಲ್ ತಂಡಕ್ಕೆ ಮರಳಿದ್ದರು. ಅವರ ಮೇಲೆ ಅಭಿಮಾನಿಗಳಿಗೆ ಅಪಾರ ನಿರೀಕ್ಷೆಯಿತ್ತು. ಆದರೆ ಎರಡನೇ ಪಂದ್ಯದಲ್ಲಿ ತಂಡ ಸಂಕಷ್ಟದಲ್ಲಿರುವಾಗ ರಾಹುಲ್ ಶೂನ್ಯಕ್ಕೆ ಔಟಾಗಿ ನಿರ್ಗಮಿಸಿದರು. ಅವರು ಔಟಾಗುತ್ತಿದ್ದಂತೇ ಅಭಿಮಾನಿಗಳ ಆಕ್ರೋಶ ಕೋಚ್ ಗಂಭೀರ್ ಮೇಲೆ ತಿರುಗಿತ್ತು.

ಸಾಮಾನ್ಯವಾಗಿ ರಾಹುಲ್ ಏಕದಿನ ಪಂದ್ಯಗಳಲ್ಲಿ ಐದನೇ ಅಥವಾ ಓಪನರ್ ಆಗಿ ಕಣಕ್ಕಿಳಿಯುತ್ತಿದ್ದರು. ಆದರೆ ಈಗ ಗಂಭೀರ್ ಕೋಚ್ ಆಗಿರುವ ಟೀಂ ಇಂಡಿಯಾದಲ್ಲಿ ರಾಹುಲ್ ರನ್ನು ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗಿಗಿಳಿಸಲಾಗಿದೆ. ಇದು ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ.

ಬೌಲರ್ ಗಳನ್ನು ಬ್ಯಾಟಿಗರಾಗಿ, ಬ್ಯಾಟಿಗರನ್ನು ಬೌಲರ್ ಗಳಾಗಿ ಪ್ರಯೋಗ ಮಾಡುವ ಗಂಭೀರ್ ಪ್ರಯೋಗಕ್ಕೆ ರಾಹುಲ್ ಬಲಿಪಶುವಾಗಿದ್ದಾರೆ. ರಾಹುಲ್ ರಂತಹ ಕ್ಲಾಸ್ ಬ್ಯಾಟಿಗರನ್ನು ಇಷ್ಟು ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿಸಿದ್ದು ಯಾಕೆ? ನಿಮ್ಮ ಈ ಅತಿಯಾದ ಪ್ರಯೋಗವೇ ಕೈ ಸುಟ್ಟುಕೊಳ್ಳುವಂತೆ ಮಾಡುತ್ತಿದೆ ಎಂದು ಗಂಭೀರ್ ಮೇಲೆ ರಾಹುಲ್ ಅಭಿಮಾನಿಗಳು ಕೆಂಡ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

ಮುಂದಿನ ಸುದ್ದಿ
Show comments