Webdunia - Bharat's app for daily news and videos

Install App

ಭಾರತ ವರ್ಸಸ್ ನ್ಯೂಜಿಲೆಂಡ್ ನಡುವೆ ಮಾನ್ಯತಾ ಟೆಕ್ ಪಾರ್ಕ್ ಬಳಿ ದೋಣಿ ಸ್ಪರ್ಧೆ ಏರ್ಪಡಿಸಿ: ನೆಟ್ಟಿಗರ ಸಲಹೆ

Krishnaveni K
ಬುಧವಾರ, 16 ಅಕ್ಟೋಬರ್ 2024 (16:42 IST)
Photo Credit: X
ಬೆಂಗಳೂರು: ಭಾರೀ ಮಳೆಯಿಂದಾಗಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಟೆಸ್ಟ್ ಪಂದ್ಯ ನಡೆಸಲು ಸಾಧ್ಯವಾಗುತ್ತಿಲ್ಲ ಮೊದಲ ದಿನದ ಆಟ ರದ್ದಾಗಿದೆ. ಇದರ ನಡುವೆ ನೆಟ್ಟಿಗರು ವಿನೂತನ ಐಡಿಯಾವೊಂದನ್ನು ನೀಡಿ ಅಣಕ ಮಾಡಿದ್ದಾರೆ.

ಒಂದೆಡೆ ಪಂದ್ಯ ರದ್ದಾಗಿದ್ದರೆ ಇನ್ನೊಂದೆಡೆ ಬೆಂಗಳೂರಿನ ರಸ್ತೆಗಳಲ್ಲಿ ನೀರು ತುಂಬಿ ಸ್ವಿಮ್ಮಿಂಗ್ ಪೂಲ್ ಗಳಂತಾಗಿವೆ. ಅದರಲ್ಲೂ ವಿಶೇಷವಾಗಿ ಐಟಿ ಹಬ್ ಎನಿಸಿಕೊಂಡಿರುವ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ನೀರು ತುಂಬಿ ಅಕ್ಷರಶಃ ಕೆರೆಯಂತಾಗಿದೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದರ ಬೆನ್ನಲ್ಲೇ ನೆಟ್ಟಿಗರೊಬ್ಬರು ಚಿನ್ನಸ್ವಾಮಿಯಲ್ಲಿ ಹೇಗಿದ್ದರೂ ಭಾರತ, ನ್ಯೂಜಿಲೆಂಡ್ ಟೆಸ್ಟ್ ಪಂದ್ಯವಾಡಲು ಸಾಧ್ಯವಾಗುತ್ತಿಲ್ಲ. ಅದರ ಬದಲು ಎರಡೂ ತಂಡಗಳ ನಡುವೆ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ದೋಣಿಯಾಟ ಏರ್ಪಡಿಸಿ. ಟೆಸ್ಟ್ ಪಂದ್ಯಕ್ಕೆ ನೀಡಲಾಗಿರುವ ಟಿಕೆಟ್ ನಲ್ಲೇ ಪ್ರೇಕ್ಷಕರಿಗೆ ಈ ದೋಣಿಯಾಟ ನೀಡಲು ಅವಕಾಶ ಕೊಡಿ ಎಂದು ಅಣಕ ಮಾಡಿದ್ದಾರೆ.

ಮಳೆ ಮತ್ತು ಒದ್ದೆ ಮೈದಾನದಿಂದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ದಿನದಾಟ ರದ್ದಾಗಿದೆ. ಎರಡನೇ ದಿನವಾದ ನಾಳೆಯೂ ಮಳೆ ಭೀತಿಯಿದ್ದು ದಿನದಾಟ ನಡೆಯುವುದು ಅನುಮಾನವಾಗಿದೆ. ಇದುವರೆಗೆ ಟಾಸ್ ಕೂಡಾ ನಡೆದಿಲ್ಲ. ಹವಾಮಾನ ವರದಿ ನೋಡಿದರೆ ಈ ಪಂದ್ಯ ನಡೆಯುವುದೇ ಅನುಮಾನವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments