Webdunia - Bharat's app for daily news and videos

Install App

ಗಾಯದ ಗೂಡಾದ ಟೀಂ ಇಂಡಿಯಾ: ನಾಲ್ಕನೇ ಟೆಸ್ಟ್ ಗೆ ರವಿಶಾಸ್ತ್ರಿಯೇ ಕಣಕ್ಕೆ!

Webdunia
ಬುಧವಾರ, 13 ಜನವರಿ 2021 (08:52 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರಲ್ಲಿ ಬಹುತೇಕರು ಗಾಯಾಳುಗಳಾಗಿ ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಮುಂದಿನ ಪಂದ್ಯಕ್ಕೆ ಸ್ವತಃ ರವಿಶಾಸ್ತ್ರಿಯೇ ನಿವೃತ್ತಿ ಹಿಂಪಡೆದು ಬ್ಯಾಟ್ ಹಿಡಿದು ಕಣಕ್ಕಿಳಿಯುತ್ತಾರಂತೆ!


ಭಾರತೀಯ ಕ್ರಿಕೆಟಿಗರ ಗಾಯಾಳುಗಳ ಲಿಸ್ಟ್ ಬೆಳೆಯುತ್ತಿರುವುದು ನೋಡಿ ನೆಟ್ಟಿಗರು ಹೀಗೆಂದು ಟ್ರೋಲ್ ಮಾಡಿದ್ದಾರೆ. ಟೀಂ ಇಂಡಿಯಾದ ಸದ್ಯದ ಅವಸ್ಥೆ ನೋಡಿದರೆ ಮುಂದಿನ ಪಂದ್ಯಕ್ಕೆ ರವಿಶಾಸ್ತ್ರಿ ಹಾಗೂ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಅವರೇ ನಿವೃತ್ತಿ ಹಿಡಿದು ಕಣಕ್ಕಿಳಿಯಬೇಕಾದೀತು ಎಂದು ನೆಟ್ಟಿಗರು ಕುಹುಕವಾಡಿದ್ದಾರೆ. ಯಾಕೆಂದರೆ ಈಗಾಗಲೇ ಮೊಹಮ್ಮದ್ ಶಮಿ, ಉಮೇಶ್ ಯಾದವ್, ಕೆಎಲ್ ರಾಹುಲ್ ಗಾಯಗೊಂಡು ತವರಿಗೆ ಮರಳಿದ್ದಾರೆ. ರವೀಂದ್ರ ಜಡೇಜಾ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ. ಹನುಮ ವಿಹಾರಿಗೆ ಸ್ನಾಯು ಸೆಳೆತವಾಗಿದೆ. ಮಯಾಂಕ್ ಅಗರ್ವಾಲ್ ಕೈಗೆ ಗಾಯಮಾಡಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಈಗಾಗಲೇ ಪಿತೃತ್ವ ರಜೆಯಲ್ಲಿದ್ದಾರೆ. ಇದೀಗ ಜಸ್ಪ್ರೀತ್ ಬುಮ್ರಾ ಕೂಡಾ ಗಾಯದ ಸಮಸ್ಯೆಯಿಂದ ಸರಣಿಯಿಂದ ಹೊರಬಿದ್ದಿದ್ದಾರೆ. ಹೀಗಾಗಿ ತಂಡದಲ್ಲಿ ಬಹುತೇಕರು ಗಾಯಾಳುಗಳಾಗಿದ್ದು, ಆಡುವ ಬಳಗಕ್ಕೆ ಆಟಗಾರರೇ ಇಲ್ಲ ಎಂಬಂತಾಗಿದೆ. ಇದೇ ಕಾರಣಕ್ಕೆ ನೆಟ್ಟಿಗರು ಇನ್ನಿಲ್ಲದಂತೆ ಟ್ರೋಲ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

IND vs ENG: ಹಾರ್ಟ್ ಬ್ರೇಕ್ ನಂತರ ಟೀಂ ಇಂಡಿಯಾ ಮುಂದಿನ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ

ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಆಡ್ತಾರಾ, ಕ್ಯಾಪ್ಟನ್ ಗಿಲ್ ಹೇಳಿದ್ದೇನು

ಲೈಂಗಿಕ ಕಿರುಕುಳ ಪ್ರಕರಣ: ಆರ್‌ಸಿಬಿ ಆಟಗಾರ ಯಶ್ ದಯಾಳ್‌ಗೆ ತಾತ್ಕಾಲಿಕ ರಿಲೀಫ್‌

WI vs AUS: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕನಿಷ್ಠ ಮೊತ್ತಕ್ಕೆ ಔಟಾದ ವೆಸ್ಟ್ ಇಂಡೀಸ್

ಮುಂದಿನ ಸುದ್ದಿ
Show comments