ರಾಂಚಿ: ಭಾರತದ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ನಾಲ್ಕನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿದೆ.
ಭಾರತ ತಂಡದಲ್ಲಿ ಕಳೆದ ಪಂದ್ಯದಲ್ಲಿ ಇದ್ದ ಆಟಗಾರರನನ್ನೇ ಈ ಪಂದ್ಯದಲ್ಲೂ ಆಡಿಸಲು ನಾಯಕ ಎಂ ಎಸ್ ಧೋನಿ ನಿರ್ಧರಿಸಿದ್ದಾರೆ. ಇದೇ ವೇಳೆ ನ್ಯೂಜಿಲೆಂಡ್ ಮೂವರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿಯಲಿದೆ. ಇದು ಸ್ಪಿನ್ನರ್ ಗಳಿಗೆ ಸಹಾಯಕವೆನಿಸುವ ಪಿಚ್ ಆದ್ದರಿಂದ ಕಿವೀಸ್ ಈ ನಿರ್ಧಾರಕ್ಕೆ ಬಂದಿದೆ.
ಐದು ಪಂದ್ಯಗಳ ಸರಣಿಯಲ್ಲಿ 2 ಪಂದ್ಯ ಗೆದ್ದು ಭಾರತ ಮುನ್ನಡೆಯಲ್ಲಿದೆ. ಇದು ನಾಯಕ ಧೋನಿ ತವರಿನಲ್ಲಿ ನಡೆಯುತ್ತಿರುವುದರಿಂದ ಸಹಜವಾಗಿ ಅವರ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ