Webdunia - Bharat's app for daily news and videos

Install App

ಟಿ20 ವಿಶ್ವಕಪ್ ಆಡುವ ವಿದೇಶೀ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ ಬೆನ್ನಲ್ಲೇ ಅಪಸ್ವರ

Krishnaveni K
ಭಾನುವಾರ, 21 ಏಪ್ರಿಲ್ 2024 (15:04 IST)
ಬೆಂಗಳೂರು: ಈ ಬಾರಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ಎರಡು ವಿದೇಶೀ ತಂಡಗಳಿಗೆ ಕನ್ನಡದ ಹೆಮ್ಮೆಯ ನಂದಿನಿ ಸಂಸ್ಥೆ ಪ್ರಾಯೋಜಕತ್ವ ನೀಡಲಿದೆ ಎಂಬ ಸುದ್ದಿ ಬಂದಿದೆ. ಇದರ ಬೆನ್ನಲ್ಲೇ ಅಪಸ್ವರವೂ ಕೇಳಿಬಂದಿದೆ.

ಟಿ20 ವಿಶ್ವಕಪ್ ಆಡಲಿರುವ ಸ್ಕಾಟ್ ಲ್ಯಾಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ಕರ್ನಾಟಕದ ನಂದಿನಿ ಸಂಸ್ಥೆ ಪ್ರಾಯೋಜಕತ್ವ ನೀಡಲಿದೆ. ಆದರೆ ಇದರ ಬೆನ್ನಲ್ಲೇ ಕೆಲವರು ವಿದೇಶೀ ತಂಡಗಳಿಗೆ ಯಾಕೆ ನಮ್ಮ ರಾಜ್ಯದ ರೈತರ ಹಣ, ಶ್ರಮ ವ್ಯಯಿಸಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಈಗ ನಂದಿನಿ ವಾರ್ ಜೋರಾಗಿ ಸದ್ದು ಮಾಡುತ್ತಿದೆ. ಉದ್ಯಮಿ ಮೋಹನ್ ದಾಸ್ ಪೈ ಎಂಬವರು ನಂದಿನಿ ನಮ್ಮ ಕರ್ನಾಟಕದ ಉತ್ಪನ್ನ. ಇದರಲ್ಲಿರುವುದು ನಮ್ಮ ರೈತರ, ನಮ್ಮ ಗ್ರಾಹಕರ ಹಣ. ಈ ಹಣ ಮೊದಲು ನಮ್ಮ ದೇಶದವರಿಗೆ, ನಮ್ಮ ಕನ್ನಡಿಗರಿಗೆ ಸೇರಬೇಕು. ಅದು ಬಿಟ್ಟು ವಿದೇಶೀ ತಂಡಕ್ಕೆ ಪ್ರಾಯೋಜಕತ್ವಕ್ಕಾಗಿ ಹಣ ವ್ಯಯಿಸುವುದು ಯಾಕೆ ಎಂದು ಪ್ರಶ್ನೆ ಮಾಡಿದ್ದರು.

ಇದರ ಬೆನ್ನಲ್ಲೇ ಈಗ ಎಕ್ಸ್ ಪುಟದಲ್ಲಿ ನಂದಿನಿ ಟ್ರೆಂಡ್ ಜೋರಾಗಿದೆ. ಕೆಲವರು ನಂದಿನಿ ವಿದೇಶೀ ತಂಡಕ್ಕೆ ಪ್ರಾಯೋಜಕತ್ವ ನೀಡುವ ಬದಲು ಮೊದಲು ನಮ್ಮ ದೇಶದ ಕ್ರೀಡಾಳುಗಳಿಗೆ, ನಮ್ಮ ದೇಶದ ಬಡವರಿಗೆ ಪ್ರಾಯೋಜಕತ್ವ, ಸಹಾಯ ಮಾಡಲಿ ಎಂದರೆ ಮತ್ತೆ ಕೆಲವರು ನಮ್ಮ ನಂದಿನಿ ಬ್ರ್ಯಾಂಡ್ ಈ ಮೂಲಕ ವಿದೇಶದವರೆಗೂ ತಲುಪಿದರೆ ನಮಗೇ ಲಾಭ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments