Select Your Language

Notifications

webdunia
webdunia
webdunia
Wednesday, 16 April 2025
webdunia

ಚಿನ್ನಸ್ವಾಮಿ ಮೈದಾನದಲ್ಲೂ ಪಾಕ್ ಕ್ರಿಕೆಟಿಗರಿಗೆ ಗೇಟ್ ಪಾಸ್!

ಚಿನ್ನಸ್ವಾಮಿ ಕ್ರೀಡಾಂಗಣ
ಬೆಂಗಳೂರು , ಗುರುವಾರ, 21 ಫೆಬ್ರವರಿ 2019 (10:32 IST)
ಬೆಂಗಳೂರು: ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ಉಗ್ರರ ದಾಳಿಯ ನಂತರ ಭಾರತ-ಪಾಕಿಸ್ತಾನ ನಡುವಿನ ಸಂಬಂಧ ಸಂಪೂರ್ಣ ಹಳಸಿದ್ದು, ದೇಶದ ವಿವಿಧ ಮೈದಾನಗಳಿಂದ ಪಾಕ್ ನ ಮಾಜಿ ದಿಗ್ಗಜ ಕ್ರಿಕೆಟಿಗರ ಫೋಟೋಗಳನ್ನು ಕಿತ್ತು ಹಾಕಲಾಗುತ್ತಿದೆ.


ಮೊಹಾಲಿ, ಜೈಪುರ, ನಾಗ್ಪುರ ಮೈದಾನಗಳಿಂದ ಈಗಾಗಲೇ ಪಾಕ್ ಕ್ರಿಕೆಟಿಗರಾದ ಇಮ್ರಾನ್ ಖಾನ್, ಜಾವೇದ್ ಮಿಯಾಂದಾದ್, ಶಾಹಿದ್ ಅಫ್ರಿದಿ ಮುಂತಾದ ಕ್ರಿಕೆಟಿಗರ ಫೋಟೋಗಳನ್ನು ಕಿತ್ತು ಹಾಕಲಾಗಿದೆ.

ಇದೀಗ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದ ಗೋಡೆಗಳಲ್ಲಿದ್ದ ಪಾಕಿಸ್ತಾನದ ಶ್ರೇಷ್ಠ ಕ್ರಿಕೆಟಿಗರ ಫೋಟೋಗಳಿಗೂ ಗೇಟ್ ಪಾಸ್ ನೀಡಲಾಗಿದೆ. ಇಲ್ಲಿಯ ಗೋಡೆಗಳಲ್ಲಿ ಭಾರತ ಸೇರಿದಂತೆ ವಿಶ್ವದ ಸಾಧಕ ಕ್ರಿಕೆಟಿಗರ ಫೋಟೋಗಳನ್ನು ತೂಗು ಹಾಕಲಾಗಿತ್ತು. ಆದರೆ ಇದೀಗ ಪಾಕ್ ಆಟಗಾರರ ಫೋಟೋಗಳನ್ನು ಕಿತ್ತು ಹಾಕಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಕ್ರಿಕೆಟ್ ಮಾತ್ರವಲ್ಲ, ಪಾಕ್ ಜತೆ ಯಾವ ಆಟವೂ ಬೇಡ ಎಂದ ಗಂಗೂಲಿ