Webdunia - Bharat's app for daily news and videos

Install App

ಭಾರತದ ವಿರುದ್ಧ ಪಾಕ್ ಸೋಲೋದಿಕ್ಕೆ ಕಾರಣ ಬರ್ಗರ್ ಅಂತೆ!

Webdunia
ಮಂಗಳವಾರ, 18 ಜೂನ್ 2019 (09:25 IST)
ಲಂಡನ್: ವಿಶ್ವಕಪ್ ಕೂಟದಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಮತ್ತೊಂದು ದಿಗ್ವಿಜಯ ಸಾಧಿಸಿದೆ. ಸಾಂಪ್ರದಾಯಿಕ ಎದುರಾಳಿ ವಿರುದ್ಧ ಸೋತಿದ್ದಕ್ಕೆ ಪಾಕ್ ತಂಡ ಈಗ ಅಭಿಮಾನಿಗಳಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ.


ಪಾಕ್ ಕ್ರಿಕೆಟ್ ತಂಡದ ನಾಯಕ ಸರ್ಫರಾಜ್ ಅಹಮ್ಮದ್ ರನ್ನು ಮಾಜಿ ವೇಗಿ ಶೊಯೇಬ್ ಅಖ್ತರ್ ಬ್ರೈನ್ ಲೆಸ್ ನಾಯಕ ಎಂದು ಜರೆದಿದ್ದಾರೆ. ಇನ್ನು, ಪಾಕ್ ಅಭಿಮಾನಿಗಳು ಕಳಪೆ ಫೀಲ್ಡಿಂಗ್, ಸ್ವಲ್ಪವೂ ಉತ್ಸಾಹವೇ ಇಲ್ಲದ ಆಡಿದ ಕ್ರಿಕೆಟಿಗರು ಫಿಟ್ನೆಸ್ ಬಗ್ಗೆ ಧ್ಯಾನ ನೀಡದ್ದಕ್ಕೆ ಸೋಲಾಯಿತು ಎಂದಿದ್ದಾರೆ.

ವಿಶೇಷವೆಂದರೆ ಪಾಕ್ ಕ್ರಿಕೆಟಿಗರ ಆಹಾರ ಅಭ್ಯಾಸದ ಬಗ್ಗೆ ಅಭಿಮಾನಿಗಳು ಟೀಕಾಪ್ರಹಾರ ನಡೆಸಿದ್ದಾರೆ. ಭಾರತದ ವಿರುದ್ಧದ ಪಂದ್ಯಕ್ಕೆ ಮೊದಲು ಪಾಕ್ ಕ್ರಿಕೆಟಿಗರು ಬರ್ಗರ್ ಸೇವಿಸುತ್ತಿರುವ ಫೋಟೋ, ವಿಡಿಯೋಗಳನ್ನು ಅಪ್ ಲೋಡ್ ಮಾಡಿರುವ ಅಭಿಮಾನಿಗಳು ಇವರಿಗೆ ಫಿಟ್ ನೆಸ್ ಇಲ್ಲ ಏನೂ ಇಲ್ಲ, ಇದಕ್ಕೇ ಸೋತರು ಎಂದು ಛೀಮಾರಿ ಹಾಕಿದ್ದಾರೆ.

31 ವರ್ಷಗಳ ಹಿಂದೆ ಇಮ್ರಾನ್ ಖಾನ್ ಇವರಿಗಿಂತ ಮುಂದಾಲೋಚನೆ ಮಾಡುತ್ತಿದ್ದರು. ಆ ಸಂದರ್ಭದಲ್ಲಿ ಇಮ್ರಾನ್ ತಮ್ಮ ತಂಡದ ಕ್ರಿಕೆಟಿಗರಿಗೆ ವಿಶ್ವಕಪ್ ನಂತಹ ದೊಡ್ಡ ಕೂಟದ ಸಂದರ್ಭದಲ್ಲಿ ಬರ್ಗರ್ ಸೇವಿಸಲು ಬಿಡುತ್ತಿರಲಿಲ್ಲ. ಆದರೆ ಈಗ ಸ್ವತಃ ಸರ್ಫರಾಜ್ ಬರ್ಗರ್ ಸೇವಿಸುತ್ತಾ ಫಿಟ್ ನೆಸ್ ಮರೆತು ಕೂತಿದ್ದಾರೆ ಎಂದು ಅಭಿಮಾನಿಗಳು ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಮುಂದಿನ ಸುದ್ದಿ
Show comments