Webdunia - Bharat's app for daily news and videos

Install App

ಶ್ರೀಲಂಕಾ ಕ್ರಿಕೆಟಿಗರ ಪ್ರವಾಸ ತಡೆ ಹಿಡಿದಿದ್ದು ಭಾರತವಂತೆ! ಪಾಕ್ ಸಚಿವನ ಹೇಳಿಕೆ

Webdunia
ಬುಧವಾರ, 11 ಸೆಪ್ಟಂಬರ್ 2019 (09:16 IST)
ಇಸ್ಲಾಮಾಬಾದ್: ಶ್ರೀಲಂಕಾ ಕ್ರಿಕೆಟಿಗರು ಪಾಕಿಸ್ತಾನದಲ್ಲಿ ನಡೆಯಲಿರುವ ಏಕದಿನ ಸರಣಿಗೆ ತೆರಳದಂತೆ ತಡೆಹಿಡಿಯುತ್ತಿರುವುದು ಭಾರತವಂತೆ! ಹೀಗಂತ ಪಾಕಿಸ್ತಾನದ ಸಚಿವ ಫವಾದ್ ಹುಸೇನ್ ಆರೋಪಿಸಿದ್ದಾರೆ.


ಶ್ರೀಲಂಕಾ ತಂಡ ಏಕದಿನ ಸರಣಿಗಾಗಿ ಪಾಕಿಸ್ತಾನ ಪ್ರವಾಸ ಮಾಡಬೇಕಿದೆ. ಆದರೆ 2009 ರಲ್ಲಿ ತಂಡದ ಮೇಲೆ ಉಗ್ರರ ದಾಳಿ ನಡೆದ ಕಾರಣಕ್ಕೆ ಲಂಕಾ ಕ್ರಿಕೆಟಿಗರು ಈಗಲೂ ಪಾಕ್ ಪ್ರವಾಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಈಗಾಗಲೇ 10 ಪ್ರಮುಖ ಆಟಗಾರರು ಪಾಕ್ ಗೆ ತೆರಳುವುದಿಲ್ಲ ಎಂದು ನಿರ್ಧರಿಸಿದ್ದಾರೆ.

ಇದು ಪಾಕಿಸ್ತಾನಕ್ಕೆ ಮುಖಭಂಗವುಂಟುಮಾಡಿದೆ. ಇದರ ಬೆನ್ನಲ್ಲೇ ಪಾಕ್ ಸಚಿವ ಫವಾದ್ ಈ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನಕ್ಕೆ ತೆರಳಿದರೆ ಐಪಿಎಲ್ ಗೆ ಸೇರಿಸಿಕೊಳ್ಳುವುದಿಲ್ಲ ಎಂದು ಲಂಕಾ ಕ್ರಿಕೆಟಿಗರಿಗೆ ಭಾರತ ಬೆದರಿಸಿದೆ ಎಂದು ಕಾಮೆಂಟೇಟರ್ ಒಬ್ಬರು ಮಾಹಿತಿ ನೀಡಿದ್ದಾರೆ. ಪಾಕಿಸ್ತಾನವನ್ನು ಮೂಲೆಗುಂಪು ಮಾಡಲು ಭಾರತ ನಡೆಸುತ್ತಿರುವ ಪ್ರಯತ್ನ ನಿಜವಾದರೆ ಅದನ್ನು ನಾವು ಖಂಡಿಸುತ್ತೇವೆ’ ಎಂದು ಫವಾದ್ ಟ್ವೀಟ್ ಮೂಲಕ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments