Webdunia - Bharat's app for daily news and videos

Install App

ನಮ್ಮಿಂದಾಗಿ ಧೋನಿ ಫೇಮಸ್ಸಾದರು ಎಂದು ಪಾರ್ಥಿವ್ ಪಟೇಲ್ ಹೇಳಿದ್ದೇಕೆ?

Webdunia
ಶನಿವಾರ, 23 ಜೂನ್ 2018 (09:08 IST)
ಮುಂಬೈ: ಮಹೇಂದ್ರ ಸಿಂಗ್ ಧೋನಿ ಎಂಬ ಕ್ರಿಕೆಟಿಗ ಇಂದು ವಿಶ್ವ ಕ್ರಿಕೆಟ್ ಜಗತ್ತಿನಲ್ಲಿ ವಿಶೇಷ ಸ್ಥಾನದಲ್ಲಿದ್ದಾರೆಂದರೆ ಅದಕ್ಕೆ ಕಾರಣ ನಮ್ಮಂತಹ ವಿಕೆಟ್ ಕೀಪರ್ ಗಳು ಎಂದು ಕ್ರಿಕೆಟಿಗ ಪಾರ್ಥಿವ್ ಪಟೇಲ್ ಹೇಳಿದ್ದಾರೆ.

ಪಾರ್ಥಿವ್ ಈ ಹೇಳಿಕೆ ಧೋನಿ ಅಭಿಮಾನಿಗಳಿಗೆ ಕೊಂಚ ಸಿಟ್ಟು ತರಿಸಬಹುದು. ಹಾಗಿದ್ದರೂ ಅದಕ್ಕೆ ಅವರು ತಕ್ಕ ಸಮರ್ಥನೆಯನ್ನೇ ಕೊಟ್ಟಿದ್ದಾರೆ. ದ್ರಾವಿಡ್ ಟೀಂ ಇಂಡಿಯಾ ನಾಯಕರಾಗಿದ್ದಾಗ ದಿನೇಶ್ ಕಾರ್ತಿಕ್ ಅಥವಾ ಪಾರ್ಥಿವ್ ಪಟೇಲ್ ಅವಕಾಶ ಪಡೆಯುತ್ತಿದ್ದರು.

ಆದರೆ ಇವರು ಯಾರೂ ಸ್ಥಿರ ಪ್ರದರ್ಶನ ನೀಡಲು ವಿಫಲರಾದರು. ಇದೇ ಸಂದರ್ಭದಲ್ಲಿ ತಂಡಕ್ಕೆ ಬಂದ ಧೋನಿ ವಿಕೆಟ್ ಕೀಪಿಂಗ್ ಜತೆಗೆ ಬ್ಯಾಟ್ಸ್ ಮನ್ ಆಗಿಯೂ ಕ್ಲಿಕ್ ಆದರು. ಹೀಗಾಗಿಯೇ ಅವರ ಸ್ಥಾನ ಗಟ್ಟಿಯಾಯಿತು.

ಒಂದು ವೇಳೆ ನಾವು ಆ ಸಂದರ್ಭದಲ್ಲಿ ಉತ್ತಮ ಪ್ರದರ್ಶನ ಕೊಡುತ್ತಿದ್ದರೆ, ಬಹುಶಃ ಧೋನಿಯನ್ನು ತಂಡಕ್ಕೆ ಆಯ್ಕೆಯೇ ಮಾಡುತ್ತಿರಲಿಲ್ಲವೇನೋ. ಹಾಗಾಗಿಯೇ ನಮ್ಮಂತಹ ಆಟಗಾರರು ಆವತ್ತು ಕಳಪೆ ಆಟ ಆಡಿದ್ದಕ್ಕೆ ಧೋನಿ ತಂಡದಲ್ಲಿ ಖಾಯಂ ಸ್ಥಾನ ಪಡೆದರು ಎಂದು ಪಾರ್ಥಿವ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಅವರ ಮಾತಿನಲ್ಲಿ ಸತ್ಯವಿದೆ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಿಎಂ ಕಡೆಯಿಂದಲೇ ನಮಗೆ ಆಹ್ವಾನ ಬಂದಿದ್ದು: ಗೊತ್ತೇ ಇಲ್ಲ ಎಂದಿದ್ದ ಸಿದ್ದರಾಮಯ್ಯ ಈಗೇನಂತಾರೆ

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments