Webdunia - Bharat's app for daily news and videos

Install App

ಐಪಿಎಲ್ ಪಂದ್ಯದ ವೇಳೆ ಚಿನ್ನಸ್ವಾಮಿಯಲ್ಲಿ ಕಳಪೆ ಆಹಾರ: ಕೆಎಸ್ ಸಿಎ ವಿರುದ್ಧ ಪ್ರಕರಣ ದಾಖಲು

Krishnaveni K
ಬುಧವಾರ, 15 ಮೇ 2024 (15:22 IST)
ಬೆಂಗಳೂರು: ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದ ವೇಳೆ ಕಳಪೆ ಆಹಾರ ಪೂರೈಕೆ ಮಾಡಿದ ಆರೋಪದಲ್ಲಿ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ವಿರುದ್ಧ ದೂರು ದಾಖಲಾಗಿದೆ.

ಇತ್ತೀಚೆಗೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಆರ್ ಸಿಬಿ ನಡುವೆ ಪಂದ್ಯ ನಡೆದಿತ್ತು. ಈ ವೇಳೆ ಕಳಪೆ ಆಹಾರ ಪೂರೈಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೈದಾನಕ್ಕೆ ಹೊರಗಿನಿಂದ ಆಹಾರ ತರುವಂತಿಲ್ಲ. ಆದರೆ ಮೈದಾನದೊಳಗೆ ನೀಡಿದ ಆಹಾರ ಕಳಪೆ ಗುಣಮಟ್ಟದ್ದಾಗಿತ್ತು.

ಈ ಬಗ್ಗೆ ಚೈತನ್ಯ ಎಂಬವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪಂದ್ಯದ ನಡುವೆ ನೀಡಿದ್ದ ಊಟ ಕಳಪೆ ಗುಣಮಟ್ಟದ್ದಾಗಿತ್ತು. ಇದನ್ನು ಸೇವಿಸಿದ ತಕ್ಷಣ ತನಗೆ ಹೊಟ್ಟೆ ತೊಳೆಸಿದಂತಾಗಿದ್ದು, ತಲೆ ಸುತ್ತು ಬಂದು ಬಿದ್ದಿರುವುದಾಗಿ ದೂರುದಾರರು ಹೇಳಿದ್ದಾರೆ.

ಪ್ರಕರಣದ ಬಗ್ಗೆ ಕೆಎಸ್ ಸಿಎ ಆಡಳಿತ ಮಂಡಳಿ, ಕ್ಯಾಂಟೀನ್ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಊಟ ಸೇವಿಸಿದ ತಕ್ಷಣ ಚೈತನ್ಯಗೆ ಹೊಟ್ಟೆ ತೊಳೆಸಿದಂತಾಗಿತ್ತು. ಬಳಿಕ ಅಲ್ಲಿಯೇ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಮೈದಾನ ಸಿಬ್ಬಂದಿಯ ಸಹಾಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮುಂದಿನ ಸುದ್ದಿ
Show comments