Webdunia - Bharat's app for daily news and videos

Install App

ಪ್ರೇಕ್ಷಕರಿಲ್ಲದೇ ಬಣಗುಡುತ್ತಿರುವ ಟೆಸ್ಟ್ ಪಂದ್ಯಗಳು, ವಿಂಡೀಸ್ ಕ್ರಿಕೆಟ್ ಮಂಡಳಿಗೆ ಚಿಂತೆ

Webdunia
ಬುಧವಾರ, 3 ಆಗಸ್ಟ್ 2016 (19:01 IST)
ಮೈದಾನದಲ್ಲಿ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ತಿಣುಕಾಡುತ್ತಿರುವ ಜತೆಗೆ ಪ್ರಸಕ್ತ ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸ್ಟೇಡಿಯಂನಲ್ಲಿ ಪ್ರೇಕ್ಷಕರು ಹೆಚ್ಚು ಸಂಖ್ಯೆಯಲ್ಲಿರದೇ ಬಣಗುಡುತ್ತಿದ್ದು, ಕುರ್ಚಿಗಳು ಖಾಲಿ, ಖಾಲಿಯಾಗಿರುವುದು ಸಾಮಾನ್ಯ ದೃಶ್ಯವಾಗಿವೆ. ತಂಡದ ಸಾಧನೆ ಬಗ್ಗೆ ಅಭಿಮಾನಿಗಳು ಬೇಸರಗೊಂಡಿದ್ದು, ಕ್ರೀಡಾಂಗಣಕ್ಕೆ ಬರುವುದನ್ನೇ ನಿಲ್ಲಿಸುವ ಮೂಲಕ ವೆಸ್ಟ್ ಇಂಡೀಸ್ ಮಂಡಳಿಯನ್ನು ಇಕ್ಕಟ್ಟಿಗೆ ಸಿಕ್ಕಿಸಿದೆ.
 
ಪ್ರೇಕ್ಷಕರನ್ನು ಮೈದಾನಕ್ಕೆ ಸೆಳೆಯುವ ತಮ್ಮ ಪ್ರಯತ್ನವನ್ನು ಹೆಚ್ಚಿಸಬೇಕು ಎಂದು ಡಬ್ಲ್ಯುಐಸಿಬಿ ಅಧ್ಯಕ್ಷ ಡೇವ್ ಕ್ಯಾಮರಾನ್ ತಿಳಿಸಿದರು. ಮೈದಾನದಲ್ಲಿ ವೈಫೈ ಸೌಲಭ್ಯ ಕಲ್ಪಿಸಬೇಕು. ಮಕ್ಕಳ ಅವಶ್ಯಕತೆಗಳನ್ನು ಉತ್ತಮ ರೀತಿಯಲ್ಲಿ ಪೂರೈಸಬೇಕು ಎಂದು ಪ್ರೇಕ್ಷಕರನ್ನು ಸೆಳೆಯುವ ತಂತ್ರದ ಬಗ್ಗೆ ಅವರು ಹೇಳಿದರು. 
 
ಟೆಸ್ಟ್ ಪಂದ್ಯಗಳು ಇಡೀ ದಿನದ ಅನುಭವ. ಕ್ರಿಕೆಟ್ ನೋಡಿ ಆನಂದಿಸಬೇಕೆಂಬ ಉದ್ದೇಶದಿಂದ ಪೋಷಕರು ತಮ್ಮ ಮಕ್ಕಳನ್ನು ಕ್ರಿಕೆಟ್ ವೀಕ್ಷಣೆಗೆ ಕರೆದುಕೊಂಡು ಹೋಗುತ್ತಾರೆ. ಆದ್ದರಿಂದ ನಾವು ಮನರಂಜನೆಗೆ ಸಂಬಂಧಿಸಿದಂತೆ ನಾವು ಇನ್ನಷ್ಟು ಸಾಧಿಸಬೇಕಿದೆ. ಅಭಿಮಾನಿಗಳು ಮನೆಯಲ್ಲಿ ಕುಳಿತು ಪಂದ್ಯವನ್ನು ವೀಕ್ಷಿಸದೇ ಮೈದಾನಕ್ಕೆ ಬರುವಂತೆ ಖಾತರಿಪಡಿಸಿಕೊಳ್ಳಬೇಕು ಎಂದು ಕ್ಯಾಮರಾನ್ ಹೇಳಿದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಡೆಲ್ಲಿ ಕ್ಯಾಪಿಟಲ್ಸ್‌ಗೆ ತವರಿನಲ್ಲಿ ಮತ್ತೆ ಮುಖಭಂಗ: ಕೋಲ್ಕತ್ತ ತಂಡಕ್ಕೆ ರೋಚಕ ಜಯ

Vaibhav SuryaVamshi:ಶತಕ ಸಿಡಿಸಿದ ವೈಭವ್ ಸೂರ್ಯವಂಶಿಗೆ ಬಿಹಾರ ಸರ್ಕಾರದಿಂದ ಬಹುಮಾನ ಘೋಷಣೆ

ಐಪಿಎಲ್‌ಗಾಗಿ ತನ್ನ ನೆಚ್ಚಿನ ಮಾಂಸಾಹಾರ, ಜಂಕ್‌ಫುಟ್‌ಗೆ ಗುಡ್‌ಬೈ ಹೇಳಿದ್ದ ವೈಭವ್‌ ಸೂರ್ಯವಂಶಿ

Virat Kohli video: ಸದ್ಯ ನೀವು ಔಟಾಗಿದ್ದೇ ಒಳ್ಳೇದಾಯ್ತು.. ಕಾಂತಾರ ಸೆಲೆಬ್ರೇಷನ್ ಮಾಡಿದ್ದ ಕೊಹ್ಲಿಗೆ ಕೆಎಲ್ ರಾಹುಲ್ ಹೇಳಿದ್ದೇನು ಬಹಿರಂಗ

Rahul Dravid: ಐಪಿಎಲ್ ನ ಅತೀ ವೇಗದ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ: ವೀಲ್ ಚೇರ್ ನಿಂದ ಎದ್ದೇಬಿಟ್ಟ ದ್ರಾವಿಡ್

ಮುಂದಿನ ಸುದ್ದಿ
Show comments